25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯವರದಿ

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

ಬೆಳ್ತಂಗಡಿ: ಕೋರ್ ಕಮಿಟಿ ಸಭೆ ವೇಳೆ ಹರೀಶ್ ಕುಮಾರ್ ರಾಜೀನಾಮೆ ನೀಡಿದ್ದಾಗಿ ಕೆಲವು ವೆಬ್‌ಸೈಟ್‌ಗಳಲ್ಲಿ ಸುದ್ದಿ ಪ್ರಕಟಗೊಂಡ ಹಿನ್ನಲೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು “ನಾನು ರಾಜಕೀಯ ನಿವೃತ್ತಿ ನೀಡಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದು ಸತ್ಯಕ್ಕೆ ದೂರವಾದ ಸುದ್ದಿ. ನಾನು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದೆ. ಹೊಸ ವರ್ಷ ಪ್ರಯುಕ್ತ ಸಿಹಿ ಹಂಚಿದ್ದು ಹೌದು, ಭಾಷಣ ಮಾಡಿದ್ದೂ ಹೌದು. ಆದರೆ ಎಲ್ಲೂ ಕೂಡಾ ರಾಜೀನಾಮೆ ನೀಡುವುದಾಗಿ ಹೇಳಿಲ್ಲ ಎಂದರು.ಈ ಕುರಿತು ಹರೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ ಎರಡು ಅವಧಿ ಪೂರ್ಣಗೊಳಿಸಿದ್ದೇನೆ. ಎರಡು ವರ್ಷ ಹಿಂದೆಯೇ ರಾಜಿನಾಮೆ ಕೊಟ್ಟಿದ್ದೆ. ಆದರೆ ಚುನಾವಣೆ ಸೇರಿದಂತೆ ವಿವಿಧ ಕಾರಣಗಳನ್ನು ನೀಡಿ ಮುಂದುವರಿಯಲು ಹೈಕಮಾಂಡ್ ಸೂಚನೆಯಿತ್ತು. ಏಳು ವರ್ಷ ಏಳು ತಿಂಗಳಿನಿಂದ ಅಧ್ಯಕ್ಷನಾಗಿದ್ದೇನೆ. ಯಾರ ಹೆಸರನ್ನು ಹೈಕಮಾಂಡ್ ಪ್ರಕಟಿಸುತ್ತದೋ ಆಗಲೇ ನಾನು ಅಧ್ಯಕ್ಷ ಹುದ್ದೆ ಹಸ್ತಾಂತರಿಸುತ್ತೇನೆ. ರಾಜಕೀಯ ನಿವೃತ್ತಿಯ ಮಾತೇ ಬರುವುದಿಲ್ಲ ಎಂದು ಹರೀಶ್ ಕುಮಾರ್ ಸ್ಪಷ್ಟನೆ ನೀಡಿದರು.

Related posts

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya
error: Content is protected !!