September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯವರದಿ

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

ಬೆಳ್ತಂಗಡಿ: ಕೋರ್ ಕಮಿಟಿ ಸಭೆ ವೇಳೆ ಹರೀಶ್ ಕುಮಾರ್ ರಾಜೀನಾಮೆ ನೀಡಿದ್ದಾಗಿ ಕೆಲವು ವೆಬ್‌ಸೈಟ್‌ಗಳಲ್ಲಿ ಸುದ್ದಿ ಪ್ರಕಟಗೊಂಡ ಹಿನ್ನಲೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು “ನಾನು ರಾಜಕೀಯ ನಿವೃತ್ತಿ ನೀಡಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದು ಸತ್ಯಕ್ಕೆ ದೂರವಾದ ಸುದ್ದಿ. ನಾನು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದೆ. ಹೊಸ ವರ್ಷ ಪ್ರಯುಕ್ತ ಸಿಹಿ ಹಂಚಿದ್ದು ಹೌದು, ಭಾಷಣ ಮಾಡಿದ್ದೂ ಹೌದು. ಆದರೆ ಎಲ್ಲೂ ಕೂಡಾ ರಾಜೀನಾಮೆ ನೀಡುವುದಾಗಿ ಹೇಳಿಲ್ಲ ಎಂದರು.ಈ ಕುರಿತು ಹರೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ ಎರಡು ಅವಧಿ ಪೂರ್ಣಗೊಳಿಸಿದ್ದೇನೆ. ಎರಡು ವರ್ಷ ಹಿಂದೆಯೇ ರಾಜಿನಾಮೆ ಕೊಟ್ಟಿದ್ದೆ. ಆದರೆ ಚುನಾವಣೆ ಸೇರಿದಂತೆ ವಿವಿಧ ಕಾರಣಗಳನ್ನು ನೀಡಿ ಮುಂದುವರಿಯಲು ಹೈಕಮಾಂಡ್ ಸೂಚನೆಯಿತ್ತು. ಏಳು ವರ್ಷ ಏಳು ತಿಂಗಳಿನಿಂದ ಅಧ್ಯಕ್ಷನಾಗಿದ್ದೇನೆ. ಯಾರ ಹೆಸರನ್ನು ಹೈಕಮಾಂಡ್ ಪ್ರಕಟಿಸುತ್ತದೋ ಆಗಲೇ ನಾನು ಅಧ್ಯಕ್ಷ ಹುದ್ದೆ ಹಸ್ತಾಂತರಿಸುತ್ತೇನೆ. ರಾಜಕೀಯ ನಿವೃತ್ತಿಯ ಮಾತೇ ಬರುವುದಿಲ್ಲ ಎಂದು ಹರೀಶ್ ಕುಮಾರ್ ಸ್ಪಷ್ಟನೆ ನೀಡಿದರು.

Related posts

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ಕಳಿಯ: ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya
error: Content is protected !!