32.6 C
ಪುತ್ತೂರು, ಬೆಳ್ತಂಗಡಿ
June 6, 2025
Uncategorized

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

ಗೇರುಕಟ್ಟೆ : ಗೇರುಕಟ್ಟೆ ಕಳಿಯ ಗ್ರಾಮದ ಪುಂಡಿಕಲ್ ಕುಕ್ಕು ಅಶ್ವತ್ಥಕಟ್ಟೆಯಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ, ಯಕ್ಷಗಾನ ಬಯಲಾಟ ಕಾರ್ಯಕ್ರಮ ಜ.4 ರಂದು ಜರಗಿತು.


ಕುಂಟಿನಿ ರಾಘವೇಂದ್ರ ಭಾಂಗೀಣ್ಣಾಯ ನೇತೃತ್ವದಲ್ಲಿ ವೈದಿಕ, ಧಾರ್ಮಿಕ ವಿಧಿವತ್ತಾಗಿ ಶ್ರೀ ಶನೀಶ್ವರ ದೇವರ ಮಹಾ ಪೂಜೆಯನ್ನು ನೆರವೇರಿಸಿದರು. ಉಜಿರೆ ಎಸ್.ಡಿ.ಎಂ.ಕಾಲೇಜು ಉಪನ್ಯಾಸಕ ಡಾ.ದಿವಾ ಕೊಕ್ಕಡ ಧಾರ್ಮಿಕ ಉಪನ್ಯಾಸ ನೀಡಿದರು. ಕುಂಟಿನಿ ರಾಘವೇಂದ್ರ ಬಾಂಗಿಣ್ಣಾಯ, ಹಿರಿಯರಾದ ಕಳಿಯ ಗ್ರಾಮದ ಪಂಚಾಯತ್ ಮಾಜಿ ಅಧ್ಯಕ್ಷ ಜನಾರ್ದನ ಪೂಜಾರಿ ಅಂಗರಪಲ್ಕೆ ಉಪಸ್ಥಿತರಿದ್ದರು.


ಸ್ಥಳೀಯ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ಏರ್ಪಡಿಸಿದ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಕನ್ನಡ ಉಪನ್ಯಾಸಕರಾದ ನಿವೃತ್ತ ಮೋಹನ್ ಭಟ್ ಕಲ್ಲೂರಾಯ ನೇತೃತ್ವದಲ್ಲಿ ಅತಿಥಿ ಯಕ್ಷಗಾನ ಕಲಾವಿದರಿಂದ ತ್ರಿಶಿರ-ದಶಶಿರ-ದ್ವಿದಶಶಿರ ಯಕ್ಷಗಾನ ಬಯಲಾಟ ನಡೆಯಿತು. ಕನ್ನಡ ಉಪನ್ಯಾಸಕರಾದ ಸುವರ್ಣ ಕುಮಾರಿ ಎಂ.ಕಲ್ಲೂರಾಯ ಕಾರ್ಯಕ್ರಮ ನಿರೂಪಣೆ ಮಾಡಿ ವಂದಿಸಿದರು.ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!