July 23, 2026
Uncategorized

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

ಗೇರುಕಟ್ಟೆ : ಗೇರುಕಟ್ಟೆ ಕಳಿಯ ಗ್ರಾಮದ ಪುಂಡಿಕಲ್ ಕುಕ್ಕು ಅಶ್ವತ್ಥಕಟ್ಟೆಯಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ, ಯಕ್ಷಗಾನ ಬಯಲಾಟ ಕಾರ್ಯಕ್ರಮ ಜ.4 ರಂದು ಜರಗಿತು.


ಕುಂಟಿನಿ ರಾಘವೇಂದ್ರ ಭಾಂಗೀಣ್ಣಾಯ ನೇತೃತ್ವದಲ್ಲಿ ವೈದಿಕ, ಧಾರ್ಮಿಕ ವಿಧಿವತ್ತಾಗಿ ಶ್ರೀ ಶನೀಶ್ವರ ದೇವರ ಮಹಾ ಪೂಜೆಯನ್ನು ನೆರವೇರಿಸಿದರು. ಉಜಿರೆ ಎಸ್.ಡಿ.ಎಂ.ಕಾಲೇಜು ಉಪನ್ಯಾಸಕ ಡಾ.ದಿವಾ ಕೊಕ್ಕಡ ಧಾರ್ಮಿಕ ಉಪನ್ಯಾಸ ನೀಡಿದರು. ಕುಂಟಿನಿ ರಾಘವೇಂದ್ರ ಬಾಂಗಿಣ್ಣಾಯ, ಹಿರಿಯರಾದ ಕಳಿಯ ಗ್ರಾಮದ ಪಂಚಾಯತ್ ಮಾಜಿ ಅಧ್ಯಕ್ಷ ಜನಾರ್ದನ ಪೂಜಾರಿ ಅಂಗರಪಲ್ಕೆ ಉಪಸ್ಥಿತರಿದ್ದರು.


ಸ್ಥಳೀಯ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ಏರ್ಪಡಿಸಿದ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಕನ್ನಡ ಉಪನ್ಯಾಸಕರಾದ ನಿವೃತ್ತ ಮೋಹನ್ ಭಟ್ ಕಲ್ಲೂರಾಯ ನೇತೃತ್ವದಲ್ಲಿ ಅತಿಥಿ ಯಕ್ಷಗಾನ ಕಲಾವಿದರಿಂದ ತ್ರಿಶಿರ-ದಶಶಿರ-ದ್ವಿದಶಶಿರ ಯಕ್ಷಗಾನ ಬಯಲಾಟ ನಡೆಯಿತು. ಕನ್ನಡ ಉಪನ್ಯಾಸಕರಾದ ಸುವರ್ಣ ಕುಮಾರಿ ಎಂ.ಕಲ್ಲೂರಾಯ ಕಾರ್ಯಕ್ರಮ ನಿರೂಪಣೆ ಮಾಡಿ ವಂದಿಸಿದರು.ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

Related posts

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ: ದಿ ಹಾರ್ಟ್ ಆಫ್ ಧರ್ಮ ಕೃತಿ ಲೋಕಾರ್ಪಣೆ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

Suddi Udaya
error: Content is protected !!