38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯವರದಿ

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

ಬೆಳ್ತಂಗಡಿ: ಕೋರ್ ಕಮಿಟಿ ಸಭೆ ವೇಳೆ ಹರೀಶ್ ಕುಮಾರ್ ರಾಜೀನಾಮೆ ನೀಡಿದ್ದಾಗಿ ಕೆಲವು ವೆಬ್‌ಸೈಟ್‌ಗಳಲ್ಲಿ ಸುದ್ದಿ ಪ್ರಕಟಗೊಂಡ ಹಿನ್ನಲೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು “ನಾನು ರಾಜಕೀಯ ನಿವೃತ್ತಿ ನೀಡಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದು ಸತ್ಯಕ್ಕೆ ದೂರವಾದ ಸುದ್ದಿ. ನಾನು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದೆ. ಹೊಸ ವರ್ಷ ಪ್ರಯುಕ್ತ ಸಿಹಿ ಹಂಚಿದ್ದು ಹೌದು, ಭಾಷಣ ಮಾಡಿದ್ದೂ ಹೌದು. ಆದರೆ ಎಲ್ಲೂ ಕೂಡಾ ರಾಜೀನಾಮೆ ನೀಡುವುದಾಗಿ ಹೇಳಿಲ್ಲ ಎಂದರು.ಈ ಕುರಿತು ಹರೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ ಎರಡು ಅವಧಿ ಪೂರ್ಣಗೊಳಿಸಿದ್ದೇನೆ. ಎರಡು ವರ್ಷ ಹಿಂದೆಯೇ ರಾಜಿನಾಮೆ ಕೊಟ್ಟಿದ್ದೆ. ಆದರೆ ಚುನಾವಣೆ ಸೇರಿದಂತೆ ವಿವಿಧ ಕಾರಣಗಳನ್ನು ನೀಡಿ ಮುಂದುವರಿಯಲು ಹೈಕಮಾಂಡ್ ಸೂಚನೆಯಿತ್ತು. ಏಳು ವರ್ಷ ಏಳು ತಿಂಗಳಿನಿಂದ ಅಧ್ಯಕ್ಷನಾಗಿದ್ದೇನೆ. ಯಾರ ಹೆಸರನ್ನು ಹೈಕಮಾಂಡ್ ಪ್ರಕಟಿಸುತ್ತದೋ ಆಗಲೇ ನಾನು ಅಧ್ಯಕ್ಷ ಹುದ್ದೆ ಹಸ್ತಾಂತರಿಸುತ್ತೇನೆ. ರಾಜಕೀಯ ನಿವೃತ್ತಿಯ ಮಾತೇ ಬರುವುದಿಲ್ಲ ಎಂದು ಹರೀಶ್ ಕುಮಾರ್ ಸ್ಪಷ್ಟನೆ ನೀಡಿದರು.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!