23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯವರದಿ

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

ಬೆಳ್ತಂಗಡಿ: ಕೋರ್ ಕಮಿಟಿ ಸಭೆ ವೇಳೆ ಹರೀಶ್ ಕುಮಾರ್ ರಾಜೀನಾಮೆ ನೀಡಿದ್ದಾಗಿ ಕೆಲವು ವೆಬ್‌ಸೈಟ್‌ಗಳಲ್ಲಿ ಸುದ್ದಿ ಪ್ರಕಟಗೊಂಡ ಹಿನ್ನಲೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು “ನಾನು ರಾಜಕೀಯ ನಿವೃತ್ತಿ ನೀಡಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದು ಸತ್ಯಕ್ಕೆ ದೂರವಾದ ಸುದ್ದಿ. ನಾನು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದೆ. ಹೊಸ ವರ್ಷ ಪ್ರಯುಕ್ತ ಸಿಹಿ ಹಂಚಿದ್ದು ಹೌದು, ಭಾಷಣ ಮಾಡಿದ್ದೂ ಹೌದು. ಆದರೆ ಎಲ್ಲೂ ಕೂಡಾ ರಾಜೀನಾಮೆ ನೀಡುವುದಾಗಿ ಹೇಳಿಲ್ಲ ಎಂದರು.ಈ ಕುರಿತು ಹರೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ ಎರಡು ಅವಧಿ ಪೂರ್ಣಗೊಳಿಸಿದ್ದೇನೆ. ಎರಡು ವರ್ಷ ಹಿಂದೆಯೇ ರಾಜಿನಾಮೆ ಕೊಟ್ಟಿದ್ದೆ. ಆದರೆ ಚುನಾವಣೆ ಸೇರಿದಂತೆ ವಿವಿಧ ಕಾರಣಗಳನ್ನು ನೀಡಿ ಮುಂದುವರಿಯಲು ಹೈಕಮಾಂಡ್ ಸೂಚನೆಯಿತ್ತು. ಏಳು ವರ್ಷ ಏಳು ತಿಂಗಳಿನಿಂದ ಅಧ್ಯಕ್ಷನಾಗಿದ್ದೇನೆ. ಯಾರ ಹೆಸರನ್ನು ಹೈಕಮಾಂಡ್ ಪ್ರಕಟಿಸುತ್ತದೋ ಆಗಲೇ ನಾನು ಅಧ್ಯಕ್ಷ ಹುದ್ದೆ ಹಸ್ತಾಂತರಿಸುತ್ತೇನೆ. ರಾಜಕೀಯ ನಿವೃತ್ತಿಯ ಮಾತೇ ಬರುವುದಿಲ್ಲ ಎಂದು ಹರೀಶ್ ಕುಮಾರ್ ಸ್ಪಷ್ಟನೆ ನೀಡಿದರು.

Related posts

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya
error: Content is protected !!