23.5 C
ಪುತ್ತೂರು, ಬೆಳ್ತಂಗಡಿ
April 11, 2025
Uncategorized

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಜ.5 ರಂದು ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷೆ ರೂಪ ನವೀನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಗ್ರಾ.ಪಂ. ಸದಸ್ಯರಾದ ಹರೀಶ್ ಶೆಟ್ಟಿ ಪದೆಂಜಿಲಾ, ಉಮೇಶ್ ಸುವರ್ಣ ಉಪಸ್ಥಿರಿದ್ದರು.

ಸಂಘದ ಅಧ್ಯಕ್ಷ ಆಕಾಶ್ ಕೋಟೆ ಅಧ್ಯಕ್ಷತೆಯನ್ನು ವಹಿಸಿದ್ದರು. ವೀರ ಕೇಸರಿ ಆಂಬುಲೆನ್ಸ್ ಚಾಲಕ ದೀಕ್ಷಿತ್, ಕರ್ನಾಟಕ ಕ್ರೀಡಾ ರತ್ನ ಕಂಬಳ ಓಟಗಾರ ಸುರೇಶ್ ಎಂ ಶೆಟ್ಟಿ, ಇಂಚರ ಸೇವಾ ಬಳಗ ನಂದಳಿಕೆ ಇವರಿಗೆ ಸನ್ಮಾನಿಸಲಾಯಿತು.

ಕಾರ್ಯದರ್ಶಿ ಸಂದೀಪ್ ಕುಕ್ಕಳ ಸ್ವಾಗತಿಸಿ ಧನ್ಯವಾದವಿತ್ತರು. ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಸಂಜೆ ಸ್ಥಳೀಯರಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು. ಯಂಗ್ ಟೈಗರ್ ಅಲೆಕ್ಕಿ ಫ್ರೆಂಡ್ಸ್ ಸದಸ್ಯರು. ಹಾಗೂ ಕಾರ್ಯಕರ್ತರು ಊರವರು ಉಪಸ್ಥಿತರಿದ್ದರು.

:-ವರದಿ ಹರ್ಷ ಬಳ್ಳಮಂಜ

Related posts

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya
error: Content is protected !!