30.4 C
ಪುತ್ತೂರು, ಬೆಳ್ತಂಗಡಿ
June 6, 2025
Uncategorized

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಜ.5 ರಂದು ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷೆ ರೂಪ ನವೀನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಗ್ರಾ.ಪಂ. ಸದಸ್ಯರಾದ ಹರೀಶ್ ಶೆಟ್ಟಿ ಪದೆಂಜಿಲಾ, ಉಮೇಶ್ ಸುವರ್ಣ ಉಪಸ್ಥಿರಿದ್ದರು.

ಸಂಘದ ಅಧ್ಯಕ್ಷ ಆಕಾಶ್ ಕೋಟೆ ಅಧ್ಯಕ್ಷತೆಯನ್ನು ವಹಿಸಿದ್ದರು. ವೀರ ಕೇಸರಿ ಆಂಬುಲೆನ್ಸ್ ಚಾಲಕ ದೀಕ್ಷಿತ್, ಕರ್ನಾಟಕ ಕ್ರೀಡಾ ರತ್ನ ಕಂಬಳ ಓಟಗಾರ ಸುರೇಶ್ ಎಂ ಶೆಟ್ಟಿ, ಇಂಚರ ಸೇವಾ ಬಳಗ ನಂದಳಿಕೆ ಇವರಿಗೆ ಸನ್ಮಾನಿಸಲಾಯಿತು.

ಕಾರ್ಯದರ್ಶಿ ಸಂದೀಪ್ ಕುಕ್ಕಳ ಸ್ವಾಗತಿಸಿ ಧನ್ಯವಾದವಿತ್ತರು. ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಸಂಜೆ ಸ್ಥಳೀಯರಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು. ಯಂಗ್ ಟೈಗರ್ ಅಲೆಕ್ಕಿ ಫ್ರೆಂಡ್ಸ್ ಸದಸ್ಯರು. ಹಾಗೂ ಕಾರ್ಯಕರ್ತರು ಊರವರು ಉಪಸ್ಥಿತರಿದ್ದರು.

:-ವರದಿ ಹರ್ಷ ಬಳ್ಳಮಂಜ

Related posts

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya
error: Content is protected !!