September 6, 2026
Uncategorized

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಜ.5 ರಂದು ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷೆ ರೂಪ ನವೀನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಗ್ರಾ.ಪಂ. ಸದಸ್ಯರಾದ ಹರೀಶ್ ಶೆಟ್ಟಿ ಪದೆಂಜಿಲಾ, ಉಮೇಶ್ ಸುವರ್ಣ ಉಪಸ್ಥಿರಿದ್ದರು.

ಸಂಘದ ಅಧ್ಯಕ್ಷ ಆಕಾಶ್ ಕೋಟೆ ಅಧ್ಯಕ್ಷತೆಯನ್ನು ವಹಿಸಿದ್ದರು. ವೀರ ಕೇಸರಿ ಆಂಬುಲೆನ್ಸ್ ಚಾಲಕ ದೀಕ್ಷಿತ್, ಕರ್ನಾಟಕ ಕ್ರೀಡಾ ರತ್ನ ಕಂಬಳ ಓಟಗಾರ ಸುರೇಶ್ ಎಂ ಶೆಟ್ಟಿ, ಇಂಚರ ಸೇವಾ ಬಳಗ ನಂದಳಿಕೆ ಇವರಿಗೆ ಸನ್ಮಾನಿಸಲಾಯಿತು.

ಕಾರ್ಯದರ್ಶಿ ಸಂದೀಪ್ ಕುಕ್ಕಳ ಸ್ವಾಗತಿಸಿ ಧನ್ಯವಾದವಿತ್ತರು. ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಸಂಜೆ ಸ್ಥಳೀಯರಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು. ಯಂಗ್ ಟೈಗರ್ ಅಲೆಕ್ಕಿ ಫ್ರೆಂಡ್ಸ್ ಸದಸ್ಯರು. ಹಾಗೂ ಕಾರ್ಯಕರ್ತರು ಊರವರು ಉಪಸ್ಥಿತರಿದ್ದರು.

:-ವರದಿ ಹರ್ಷ ಬಳ್ಳಮಂಜ

Related posts

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya
error: Content is protected !!