25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ಜ.7 ರಂದು ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ ಸರಕಾರಿ ಪ್ರೌಢ ಶಾಲೆ ಮಾಣಿಲ ಇಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ Epiance Software Pvt Ltd. ಇದರ ಡೈರೆಕ್ಟರ್ ಸತೀಶ್ ನಾಯಕ್ ಅವರು ಮಾತನಾಡಿ ತಿಳುವಳಿಕೆ ಎಂಬುವುದು ಬೆಳಗುತ್ತಿರುವ ದೀಪದಂತೆ ಅದನ್ನು ನಾವು ಇನ್ನೊಬ್ಬರಿಗೆ ಹಂಚಿ ಕೊಳ್ಳುವುದರಿಂದ ಅದು ಎಲ್ಲೆಡೆಯೂ ಪಸರಿಸುತ್ತದೆ ಹಾಗೆಯೇ ಪರೀಕ್ಷೆಯನ್ನು ಹೇಗೆ ಎದುರಿಸಬಹುದು ಮತ್ತು ನಂತರ ಯಾವ ವಿಭಾಗವನ್ನು ಆಯ್ಕೆ ಮಾಡಬಹುದು ಹಾಗೂ ವಿದ್ಯಾರ್ಥಿಯು ಒಂದು ಮನೆಯ ಮಗುವಾಗಿ, ಶಾಲೆಯ ವಿದ್ಯಾರ್ಥಿಯಾಗಿ, ಊರಿನ ಪ್ರಜೆಯಾಗಿ ಮನೆಗೆ-ಶಾಲೆಗೆ-ಊರಿಗೆ ನಮ್ಮ ಕೊಡುಗೆ ಏನು ಎಂಬುವುದನ್ನು ಸವಿಸ್ತಾರವಾಗಿ ತಿಳಿಸಿ ಕೊಟ್ಟರು.
ಕಾರ್ಯಾಗಾರದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಲತಾ ಮೇಡಂ ಮಾತನಾಡಿ ಮಾತೃಭೂಮಿ ಯುವ ವೇದಿಕೆ ಸಂಘದ ಕಾರ್ಯ ವೈಖರಿಯ ಬಗ್ಗೆ ಶ್ಲಾಘನೀಯ ಪ್ರಶಂಸೆಯನ್ನು ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಸೇನಾ ವಾಹನ ಆಯತಪ್ಪಿ ಕಂದಕಕ್ಕೆ ಉರುಳಿಬಿದ್ದು ಮೃತಪಟ್ಟ ಐವರು ಯೋಧರಾದ ಸುಬೇದಾರ್ ದಯಾನಂದ ತಿರಕಣ್ಣವರ್, ಲ್ಯಾನ್ಸ್ ಹವಾಲ್ದಾರ್ ಅನೂಪ್, ನಾಯಕ್ ಘಡ್ಗೆ ಶುಭ ಸಮಾಧಾನ್, ಸಿಪಾಯಿ ನಿಕುರೆ ದಿಗಂಬರ್ ಮತ್ತು ಸೆ.ಮಹೇಶ್ ಮರಿಗೊಂಡ್ ಇವರು ವೀರ ಮರಣವನ್ನು ಹೊಂದಿರುತ್ತಾರೆ. ದೇಶ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಈ ಯೋಧರ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಭಗವಂತ ಕರುಣಿಸಲಿ ಹಾಗೆಯೇ ಕಳೆದ ಐದಾರು ತಿಂಗಳ ಅವಧಿಯಲ್ಲಿ ಹಿರಿಯರಾದ ದಿ| ಭುಜಂಗ ಆಚಾರ್ಯ, ದಿ| ನಾರಾಯಣ ಆಚಾರ್ಯ, ದಿ| ಅನಂತ ನಾಯಕ್, ದಿ| ಚಕ್ಕು ಮೇರಾ ಇವರನ್ನು ನಮ್ಮ ಗ್ರಾಮ ಕಳೆದು ಕೊಂಡಿದೆ. ಇವರಿಗೂ ಮತ್ತು ಯೋಧರ ಆತ್ಮಗಳಿಗೆ ಚಿರಶಾಂತಿಯನ್ನು ಕೋರುತ್ತಾ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನವೀನ್ ಕುಮಾರ್ ಕಕ್ವೆ ವಹಿಸಿದರು, ಸದಸ್ಯರಾದ ಮಿಥುನ್ ಕುಮಾರ್ ಇವರು ಸ್ವಾಗತಿಸಿ, ಸದಸ್ಯರಾದ ಶ್ರೀಮತಿ ಮಂಜುಳಜ್ಯೋತಿ ವಂದಿಸಿದರು. ಕು|ಮನ್ವಿ, ಕು|ವರ್ಷಾ ಮತ್ತು ಕು| ಆಶಿಕಾ ಪ್ರಾರ್ಥಿಸಿ, ಸದಸ್ಯೆ ಕು| ದೀಕ್ಷಾ ಕಾಪಿಕಾಡ್ ಇವರು ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಂಪ್ಯೂಟರ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya
error: Content is protected !!