Uncategorized

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

ಗೇರುಕಟ್ಟೆ : ಗೇರುಕಟ್ಟೆ ಕಳಿಯ ಗ್ರಾಮದ ಪುಂಡಿಕಲ್ ಕುಕ್ಕು ಅಶ್ವತ್ಥಕಟ್ಟೆಯಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ, ಯಕ್ಷಗಾನ ಬಯಲಾಟ ಕಾರ್ಯಕ್ರಮ ಜ.4 ರಂದು ಜರಗಿತು.


ಕುಂಟಿನಿ ರಾಘವೇಂದ್ರ ಭಾಂಗೀಣ್ಣಾಯ ನೇತೃತ್ವದಲ್ಲಿ ವೈದಿಕ, ಧಾರ್ಮಿಕ ವಿಧಿವತ್ತಾಗಿ ಶ್ರೀ ಶನೀಶ್ವರ ದೇವರ ಮಹಾ ಪೂಜೆಯನ್ನು ನೆರವೇರಿಸಿದರು. ಉಜಿರೆ ಎಸ್.ಡಿ.ಎಂ.ಕಾಲೇಜು ಉಪನ್ಯಾಸಕ ಡಾ.ದಿವಾ ಕೊಕ್ಕಡ ಧಾರ್ಮಿಕ ಉಪನ್ಯಾಸ ನೀಡಿದರು. ಕುಂಟಿನಿ ರಾಘವೇಂದ್ರ ಬಾಂಗಿಣ್ಣಾಯ, ಹಿರಿಯರಾದ ಕಳಿಯ ಗ್ರಾಮದ ಪಂಚಾಯತ್ ಮಾಜಿ ಅಧ್ಯಕ್ಷ ಜನಾರ್ದನ ಪೂಜಾರಿ ಅಂಗರಪಲ್ಕೆ ಉಪಸ್ಥಿತರಿದ್ದರು.


ಸ್ಥಳೀಯ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ಏರ್ಪಡಿಸಿದ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಕನ್ನಡ ಉಪನ್ಯಾಸಕರಾದ ನಿವೃತ್ತ ಮೋಹನ್ ಭಟ್ ಕಲ್ಲೂರಾಯ ನೇತೃತ್ವದಲ್ಲಿ ಅತಿಥಿ ಯಕ್ಷಗಾನ ಕಲಾವಿದರಿಂದ ತ್ರಿಶಿರ-ದಶಶಿರ-ದ್ವಿದಶಶಿರ ಯಕ್ಷಗಾನ ಬಯಲಾಟ ನಡೆಯಿತು. ಕನ್ನಡ ಉಪನ್ಯಾಸಕರಾದ ಸುವರ್ಣ ಕುಮಾರಿ ಎಂ.ಕಲ್ಲೂರಾಯ ಕಾರ್ಯಕ್ರಮ ನಿರೂಪಣೆ ಮಾಡಿ ವಂದಿಸಿದರು.ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

Related posts

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya
error: Content is protected !!