April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya
error: Content is protected !!