23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya
error: Content is protected !!