July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಬಿ ಕೆ ಹರಿಪ್ರಸಾದ್‌ರವರಿಗೆ ನೂತನ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿಗಳಾಗಿ ನೇಮಕ ಮಾಡುವಂತೆ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರ ಸಂಘದಿಂದ ಆಗ್ರಹ: ಸಂಜೀವ ಪೂಜಾರಿ

Suddi Udaya
error: Content is protected !!