July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

ಬೆಳ್ತಂಗಡಿ.: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು ಇದುವರೆಗೆ 230 ಜನರು ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದ 64 ಜಿಲ್ಲೆಗಳ ಪೈಕಿ 52 ಜಿಲ್ಲೆಗಳಲ್ಲಿ ಹಿಂದೂ ವಿರೋಧಿ ಹಿಂಸಾಚಾರದ ಘಟನೆಗಳು ನಡೆದಿವೆ. ಶೇಖ್ ಹಸೀನಾ ಸರಕಾರ ರಾಜೀನಾಮೆ ನೀಡಿದ ನಂತರ ಹಿಂದೂಗಳ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ, ಹಿಂದೂ ಯುವಕ, ಉತ್ಸವ್ ಮಂಡಲನನ್ನು ತಥಾಕಥಿತ ಧರ್ಮನಿಂಧನೆಯ ಆರೋಪದ ಮೇಲೆ ಜಿಹಾದಿ ಜನಸಮೂಹವು ನೇರವಾಗಿ ಪೊಲೀಸ್ ಠಾಣೆಗೆ ನುಗ್ಗಿ ಆ ಯುವಕನ ಎರಡೂ ಕಣ್ಣುಗಳನ್ನು ಕಿತ್ತು ಹಾಕಿದೆ. ಬಾಂಗ್ಲಾದೇಶದಲ್ಲಿ ಜಿಹಾದಿಗಳು ಹಿಂದೂಗಳನ್ನು ರಾಜಾರೋಷವಾಗಿ ಕೊಲ್ಲುವುದು, ಹಿಂದೂ ಮನೆಗಳನ್ನು ಸುಡುವುದು, ಹಿಂದೂ ದೇವಸ್ಥಾನಗಳನ್ನು ಧ್ವಂಸ ಮಾಡುವುದು, ಭೂಮಿಯನ್ನು ಕಬಳಿಸುವುದು, ಹಿಂದೂ ಮಹಿಳೆಯರ ಮೇಲೆ ಬಲಾತ್ಕಾರವೂ ನಡೆಯುತ್ತಿದೆ.

ಬಹುಸಂಖ್ಯಾತ ಹಿಂದೂಗಳಿರುವ ಭಾರತ ದೇಶ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಮುಂದಾಗಿ ಬಾಂಗ್ಲಾದೇಶಿ ನುಸುಳುಕೋರರನ್ನು ದೇಶದಿಂದ ಹೊರಹಾಕಬೇಕು, ಬಾಂಗ್ಲಾದೇಶಿ ಉತ್ಪನ್ನಗಳನ್ನು ಬಹಿಸ್ಕರಿಸಿ, ಬಾಂಗ್ಲಾದೇಶದ ಆಕ್ರಮಣಕಾರರಿಗೆ ಸಹಾಯ ಮಾಡುವವರ ಮೇಲೆ ರಾಷ್ಟ್ರದ್ರೋಹದ ಅಪರಾಧ ದಾಖಲಿಸಬೇಕೆಂದು ಹಲವು ಫಲಕಗಳನ್ನು ಹಿಡಿದುಕೊಂಡು ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜ.08. ರಂದು ಶಾಂತಿಯುತವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ಲೆಕಾರ್ಡ್ಸ್ ಹಿಡಿದು ಜನರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಸದಾಶಿವ ಶೆಟ್ಟಿ ಅರುವ, ಪರಮೇಶ್ವರ ಎಂ, ಶ್ರೀನಿವಾಸ ಸಿ, ಬಾಲಕೃಷ್ಣ ಗೌಡ ರೆಖ್ಯ, ರಾಘವೇಂದ್ರ ಕಾಮತ್ ಉಜಿರೆ, ಸೌಮ್ಯ ಬಂದಾರು, ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು, ಹಾಗೂ ಧರ್ಮ ಪ್ರೇಮಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya
error: Content is protected !!