September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

ಬೆಳ್ತಂಗಡಿ.: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು ಇದುವರೆಗೆ 230 ಜನರು ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದ 64 ಜಿಲ್ಲೆಗಳ ಪೈಕಿ 52 ಜಿಲ್ಲೆಗಳಲ್ಲಿ ಹಿಂದೂ ವಿರೋಧಿ ಹಿಂಸಾಚಾರದ ಘಟನೆಗಳು ನಡೆದಿವೆ. ಶೇಖ್ ಹಸೀನಾ ಸರಕಾರ ರಾಜೀನಾಮೆ ನೀಡಿದ ನಂತರ ಹಿಂದೂಗಳ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ, ಹಿಂದೂ ಯುವಕ, ಉತ್ಸವ್ ಮಂಡಲನನ್ನು ತಥಾಕಥಿತ ಧರ್ಮನಿಂಧನೆಯ ಆರೋಪದ ಮೇಲೆ ಜಿಹಾದಿ ಜನಸಮೂಹವು ನೇರವಾಗಿ ಪೊಲೀಸ್ ಠಾಣೆಗೆ ನುಗ್ಗಿ ಆ ಯುವಕನ ಎರಡೂ ಕಣ್ಣುಗಳನ್ನು ಕಿತ್ತು ಹಾಕಿದೆ. ಬಾಂಗ್ಲಾದೇಶದಲ್ಲಿ ಜಿಹಾದಿಗಳು ಹಿಂದೂಗಳನ್ನು ರಾಜಾರೋಷವಾಗಿ ಕೊಲ್ಲುವುದು, ಹಿಂದೂ ಮನೆಗಳನ್ನು ಸುಡುವುದು, ಹಿಂದೂ ದೇವಸ್ಥಾನಗಳನ್ನು ಧ್ವಂಸ ಮಾಡುವುದು, ಭೂಮಿಯನ್ನು ಕಬಳಿಸುವುದು, ಹಿಂದೂ ಮಹಿಳೆಯರ ಮೇಲೆ ಬಲಾತ್ಕಾರವೂ ನಡೆಯುತ್ತಿದೆ.

ಬಹುಸಂಖ್ಯಾತ ಹಿಂದೂಗಳಿರುವ ಭಾರತ ದೇಶ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಮುಂದಾಗಿ ಬಾಂಗ್ಲಾದೇಶಿ ನುಸುಳುಕೋರರನ್ನು ದೇಶದಿಂದ ಹೊರಹಾಕಬೇಕು, ಬಾಂಗ್ಲಾದೇಶಿ ಉತ್ಪನ್ನಗಳನ್ನು ಬಹಿಸ್ಕರಿಸಿ, ಬಾಂಗ್ಲಾದೇಶದ ಆಕ್ರಮಣಕಾರರಿಗೆ ಸಹಾಯ ಮಾಡುವವರ ಮೇಲೆ ರಾಷ್ಟ್ರದ್ರೋಹದ ಅಪರಾಧ ದಾಖಲಿಸಬೇಕೆಂದು ಹಲವು ಫಲಕಗಳನ್ನು ಹಿಡಿದುಕೊಂಡು ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜ.08. ರಂದು ಶಾಂತಿಯುತವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ಲೆಕಾರ್ಡ್ಸ್ ಹಿಡಿದು ಜನರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಸದಾಶಿವ ಶೆಟ್ಟಿ ಅರುವ, ಪರಮೇಶ್ವರ ಎಂ, ಶ್ರೀನಿವಾಸ ಸಿ, ಬಾಲಕೃಷ್ಣ ಗೌಡ ರೆಖ್ಯ, ರಾಘವೇಂದ್ರ ಕಾಮತ್ ಉಜಿರೆ, ಸೌಮ್ಯ ಬಂದಾರು, ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು, ಹಾಗೂ ಧರ್ಮ ಪ್ರೇಮಿಗಳು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಸಭೆ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya

ಬೋಳಾರದಲ್ಲಿ ಶ್ರೀ ಮಹಾಭಾರತ ರಸಪ್ರಶ್ನೆ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬದ್ರಿಯಾ ಜುಮ್ಮಾ ಮಸ್ಜಿದ್ ಉಜಿರೆ ಟೌನ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya
error: Content is protected !!