April 21, 2025
Uncategorized

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರು ರಾಜಕೀಯ ನಿವೃತ್ತಿ ಘೋಷಿಸುತ್ತಾರೆ ಎಂಬ ಶೀರ್ಷಿಕೆಯನ್ನು ಹಾಕಿ ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿರುವುದು ವಿಷಾದನೀಯ. ಇದು ಸತ್ಯಕ್ಕೆ ದೂರವಾಗಿದ್ದು ಯಾವುದೇ ರೀತಿಯಲ್ಲಿ ರಾಜಕೀಯ ನಿವೃತ್ತಿಯನ್ನು ಘೋಷಿಸಿಲ್ಲ. ಇದು ಯಾರೊ, ಸ್ವಹಿಡಿತಕ್ಕಾಗಿ ಯಾರನ್ನೋ ಬಳಸಿಕೊಂಡು ಮಾಡುತ್ತಿರುವ ಪಿತ್ತೂರಿ ಇದನ್ನು ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ಖಂಡಿಸುತ್ತೇವೆ ಎಂದು ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹೇಳಿದರು

ಅವರು ಜ.೮ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಬೆಳ್ತಂಗಡಿ ತಾಲೂಕಿನಲ್ಲಿ ಕಾಂಗ್ರೆಸ್ ಅತ್ಯಂತ ನಿಷ್ಟಿಷ್ಟ ಸ್ಥಿತಿಗೆ ತಲುಪಿದಾಗ ಹರೀಶ್ ಕುಮಾರ್ ರವರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮತ್ತೆ ಮೊದಲಿನಂತೆ ವಿಜೃಂಭಿಸಲು ಪಣತೊಟ್ಟವರು. ಪಕ್ಷದ ಕೆಲಸವನ್ನು ಚಾಚು ತಪ್ಪದೇ ಬಹಳ ನಿಷ್ಠೆಯಿಂದ ಮಾಡಿದವರು. ಪಕ್ಷ ವಹಿಸಿಕೊಟ್ಟಂತ ಎಲ್ಲ ಜವಾಬ್ದಾರಿಗಳನ್ನು ಪ್ರೀತಿಯಿಂದ ನಿಭಾಯಿಸಿ ಅದನ್ನು ಕರ್ತವ್ಯವೆಂದು ನಂಬಿ ಬದುಕಿದವರು. ೧೯೭೮ರ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಶೀಮತಿ ಇಂದಿರ ಗಾಂಧಿಯವರು ಸ್ಪರ್ಧಿಸಿದಾಗ ಜೀವ ಪಣಕ್ಕಿಟ್ಟು ಕೆಲಸ ಮಾಡಿದವರು ಕಾಂಗ್ರೆಸ್ ಪಕ್ಷದ ನಿಷ್ಠವಂತ ಕಾರ್ಯಕರ್ತರಾಗಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದವರು ಎಂದರು.

ಹರೀಶ್ ಕುಮಾರ್ ಅವರ ಸೇವೆಯನ್ನು ಗುರುತಿಸಿ ಹೈಕಮಾಂಡ್ ಜಿಲ್ಲಾಧ್ಯಕ್ಷನಾಗಿ ನೇಮಿಸಿ ಏಳು ವರ್ಷಗಳು ಕಳೆದಿವೆ. ಜಿಲ್ಲೆಯಲ್ಲಿ ಕೂಡ ಪಕ್ಷ ನಿಷ್ಠೆಯಿಂದ ಕೆಲಸವನ್ನು ಮಾಡಿಕೊಂಡು ಬಂದವರು.ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಘೋಷಿಸಿ ಈಗಾಗಲೇ ಎರಡು ವರ್ಷ ಕಳೆದಿದ್ದರು ಅವರ ಸೇವೆಯನ್ನು ಗುರುತಿಸಿ ಪಕ್ಷದ ಹೈಕಮಾಂಡ್ ಇನ್ನೂ ಕೂಡ ಅವರನ್ನು ಅಧ್ಯಕ್ಷರಾಗಿ ಮುಂದುವರಿಸುತ್ತಿರುವುದು ನಮಗೆಲ್ಲ ಹೆಮ್ಮೆಯ ವಿಚಾರವಾಗಿದೆ ಎಂದರು.

ಅಚಲ ಪಕ್ಷ ನಿಷ್ಠೆ ಉಳ್ಳವರಾದ ಕೆ. ಹರೀಶ್ ಕುಮಾರ್ ರವರ ಬಗ್ಗೆ ಸುಳ್ಳು ಸುದ್ದಿಯನ್ನು ಹರಡಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಯಾರು ಈ ಸುಳ್ಳು ಸುದ್ದಿಯನ್ನು ಹರಡುತ್ತಿದ್ದಾರೋ ಅವರ ವಿರುದ್ದ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಮೋಹನ್ ಶೆಟ್ಟಿಗಾರ್, ಡಿಸಿಸಿ ಉಪಾಧ್ಯಕ್ಷ ಬಿ.ಎಂ. ಹಮೀದ್, ಕೆ. ಶೈಲೇಶ್ ಕುಮಾರ್ ಕುರ್ತೋಡಿ, ಬಿ.ಎ. ಹಮೀದ್ ಉಜಿರೆ, ಬೆಳ್ತಂಗಡಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೀಶ್ ಡಿ., ಪ್ರವೀಣ್ ವಿ.ಜಿ. ನಡ, ಪ್ರಭಾಕರ್ ಶಾಂತಿಗೋಡ್, ಕಾರ್ಮಿಕ ವಿಭಾಗದ ಪ್ರ. ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಕುವೆಟ್ಟು ಗ್ರಾ.ಪಂ. ಮಾಜಿ ಸದಸ್ಯ ಸಲೀಂ ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!