23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 9 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳು ವಿಜಯಿಯಾಗಿದ್ದಾರೆ‌.ಆದರೆ ಹೈಕೋರ್ಟಿನ ಆದೇಶ ಬರಬೇಕಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಫಲಿತಾಂಶ ಘೋಷಣೆ ಮಾಡದೇ ತಡೆ ಹಿಡಿದಿದ್ದಾರೆ.

ಒಟ್ಟು 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 24 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಾದ ಅಶೋಧರ ಎನ್,ತಾರನಾಥ ಗೌಡ,ನಾರಾಯಣ ರಾವ್,ಶಶಿಕಲಾ,ಶೀಲಾ,ರಾಮ್ ಕುಮಾರ್,ಶೀನಪ್ಪ,ಸುಧೀರ್ ಆರ್ ಸುವರ್ಣ,ಆನಂದ ಸಾಲಿಯಾನ್ 9 ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಹಿಂದಿನ ಸಾಲಿನ ಅಧ್ಯಕ್ಷ ನವೀನ್ ಕೆ ಸಾಮಾನಿ,ದಿನೇಶ್,ಸುಧೀರ್ ಗೌಡ ಸೇರಿದಂತೆ ಮೂವರು ಪರಾಭವಗೊಂಡಿದ್ದಾರೆ.

ಕಾಂಗ್ರೇಸ್ ಬೆಂಬಲಿತಾ ಅಭ್ಯರ್ಥಿಗಳಾದ ಕುಶಾಲಪ್ಪ ಗೌಡ,ಚಿದಾನಂದ ಇಂಚರ,ಅಶೋಕ್ ಸುವರ್ಣ ಈ ಮೂವರು ಜಯ ಗಳಿಸಿದ್ದಾರೆ. ಪುಷ್ಪಾ ಮಲ್ಲಿಕಾ,ಗೋಪಾಲ,ಹರ್ಷ ಜೈನ್,ಕೃಷ್ಣಪ್ಪ ಪೂಜಾರಿ,ಪುಷ್ಪರಾಜ್,ಸಂಜೀವ, ಅಶ್ವಥ್,ಪ್ರಸಾದ್ ಪಿಂಟೋ 9 ಅಭ್ಯರ್ಥಿಗಳು ಸೋಲು ಕಂಡಿದ್ದಾರೆ‌.

ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಗೋಪಾಲ ಎನ್.ಜೆ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ನ್ಯಾಯಾಲಯದ ಆದೇಶದ ಬಳಿಕ ಘೋಷಣೆ:
ಸಹಕಾರಿ ಸಂಘದ ಎರಡು ಮಹಾಸಭೆಗೆ ಗೈರು ಹಾಜರಾಗದ ಸಂಘದ ಸದಸ್ಯರಿಗೆ ಸಹಕಾರಿ ಸಂಘದ ನಿಯಮದಂತೆ ಸಂಘದ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಇಲ್ಲ. ಈ ಹಿನ್ನಲೆಯಲ್ಲಿ ಮತದಾನದ ಅವಕಾಶ ಕಳೆದುಕೊಂಡ ಸಂಘದ ಸದಸ್ಯರು ಬೆಂಗಳೂರು ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್ಪಿಟಿಷನ್‌ನಂತ ನ್ಯಾಯಲಯ ಎಲ್ಲ ಸದಸ್ಯರಿಗೂ ಮತದಾನಕ್ಕೆ ಅನುಮತಿ ನೀಡಿ, ಮುಂದಿನ ಆದೇಶವನ್ನು ಕಾಯ್ದಿರಿಸಿದೆ. ನ್ಯಾಯಾಯಲದ ಆದೇಶದಂತೆ ಮತದಾನಕ್ಕೆ ಅನುಮತಿ ಪಡೆದಿರುವ ಸದಸ್ಯರು ಮತ ಚಲಾಯಿಸಿದ್ದು ಆ ಮತಗಳನ್ನು ಪ್ರತ್ಯೇಕವಾಗಿ ನಿರ್ವಹಿಸಿ, ಅಭ್ಯರ್ಥಿ, ಏಜಂಟರ ಸಮ್ಮುಖದಲ್ಲಿ ಎಣಿಕೆಯನ್ನು ಮಾಡಲಾಗಿದೆ. ಎಲ್ಲಾ ಕ್ಷೇತ್ರಗಳ ಚುನಾವಣಾ ಫಲಿತಾಂಶವನ್ನು ಉಚ್ಚ ನ್ಯಾಯಾಲಯದ ಆದೇಶ ಬಂದ ನಂತರ ಚುನಾವಣಾಧಿಕಾರಿಗಳು ಘೋಷಣೆ ಮಾಡಲಿದ್ದಾರೆ.

Related posts

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya

ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ ಹೃದಯಾಘಾತದಿಂದ ನಿಧನ: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದರೂ ದೊರೆಯದ ಸೌಲಭ್ಯ: ಸಾರ್ವಜನಿಕರ ಆಕ್ರೋಶ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!