July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ವಿರುದ್ದ ಜ. 07 ರಂದು ಖಾಸಗಿ ವೆಬ್ ನ್ಯೂಸ್ ವೊಂದರಲ್ಲಿ ಹಾಲಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಇವರು ರಾಜಕೀಯ ನಿವೃತಿ ಪೋಷಿಸಿದ್ದಾರೆಂದು ಸುಳ್ಳು ಸುದ್ದಿಯನ್ನು ಬಿತ್ತರಿಸಿ, ಕೆ. ಹರೀಶ್ ಕುಮಾರ್ ಇವರ ಅಭಿಮಾನಿಗಳಲ್ಲಿ ಮತ್ತು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸಿ ದಕ್ಷಿಣ ಕನ್ನಡ ಜಿಲ್ಲೆಯ ಜನರಲ್ಲಿ ಸಂಶಯವನ್ನು ಉಂಟುಮಾಡುವಂತಹ ಮತ್ತು ಅವರಿಗೆ ಮಾನಹಾನಿ ಆಗುವಂತೆ ಸುದ್ದಿಯನ್ನು ಬಿತ್ತರಿಸಿದ್ದು, ಶಾಂತಿಯುತ ದಕ್ಷಿಣ ಕನ್ನಡದ ಜನರಲ್ಲಿ ಗೊಂದಲವನ್ನು ಸೃಷ್ಟಿಮಾಡುವಂತಹ ಕೀಲು ಮನೋಭಾವನೆಯ ಸುದ್ದಿಯನ್ನು ಹರಡಿರುತ್ತಾರೆ.

ಈ ವೆಬ್ ನ್ಯೂಸ್ ಇವರ ವಿರುದ್ದ ಸೂಕ್ತವಾದ ತನಿಖೆಯನ್ನು ಮಾಡಿ ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೆಪಿಸಿಸಿ ಸದಸ್ಯರಾದ ಮೋಹನ್ ಶೆಟ್ಟಿಗಾರ್ ಉಜಿರೆ ಮತ್ತು ನ್ಯಾಯವಾದಿ ಕೇಶವ ಪಿ. ಬೆಳಾಲು ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕರಿಗೆ ದೂರನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಕುವೆಟ್ಟು ಗ್ರಾ.ಪಂ. ಮಾಜಿ ಸದಸ್ಯ ಸಲೀಂ,. ಡಿಸಿಸಿ ಉಪಾಧ್ಯಕ್ಷ ಬಿ.ಎಮ್. ಹಮೀದ್, ಕೆ. ಶೈಲೇಶ್ ಕುಮಾರ್ ಕುರ್ತೋಡಿ, ಬಿ.ಎ ಹಮೀದ್ ಉಜಿರೆ, ಬೆಳ್ತಂಗಡಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಜಗದೀಶ್, ಅಭಿನಂದನ್ ಹರೀಶ್ ಕುಮಾರ್, ಪ್ರವೀಣ್ ವಿ. ಜಿ ನಡ, ಪ್ರಭಾಕರ್ ಶಾಂತಿಗೋಡ್ ಉಪಸ್ಥಿತರಿದ್ದರು.

Related posts

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya
error: Content is protected !!