23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

ಕಣಿಯೂರು : ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕ ಸಂಭ್ರಮ, ನೂತನ ಕಟ್ಟಡ ಮತ್ತು ರಂಗಮಂದಿರ ಉದ್ಘಾಟನೆಯು ಜ.5 ರಂದು ಜರುಗಿತು.
ಪಿಲಿಗೂಡು ಪದ್ಮನಾಭ ಶಿಲ್ಪಿ ಧ್ವಜಾರೋಹಣ ಮಾಡಿದರು. ಕಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಾನಕಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ನೂತನ ಕೊಠಡಿ ಮತ್ತು ರಂಗ ಮಂದಿರವನ್ನು ಉದ್ಘಾಟಿಸಿದರು.

ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಾಲೆಗೆ ಡೆಸ್ಕ್, ಬೆಂಚು ಕೊಡುಗೆ ನೀಡಲಾಯಿತು. ಹಳೆ ವಿದ್ಯಾರ್ಥಿ ನಿವೃತ್ತ ಅದಾಯ ತೆರಿಗೆ ಇಲಾಖೆ ಚಂದ್ರ ಕುಮಾರ್, ಜಯಸೇನ ಜಾಜಿ ಬೆಟ್ಟು, ತಿಲಕ್ ನಾಯಕ್ ಕುಡುವಂತಿ, ಪದ್ಮನಾಭ ಶಿಲ್ಪಿ ಪಿಲಿಗೂಡು ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಸೇಸಪ್ಪ ಮೂಲ್ಯ ,ಶ್ರೀಮತಿ ಪ್ರಿಯಾಂಕ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಧಿಕಾರಿ ತಾರಾಕೇಸರಿ, ಹಳೆ ವಿದ್ಯಾರ್ಥಿ ನಿವೃತ್ತ ಅದಾಯ ತೆರಿಗೆ ಇಲಾಖೆ ಚಂದ್ರ ಕುಮಾರ್, ಕಣಿಯೂರು ಗುತ್ತು ಸುದರ್ಶನ ಹೆಗ್ಡೆ, ಪದ್ಮುಂಜ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ನೂತನ ಹಾಲಿ ಸದಸ್ಯ ರಕ್ಷಿತ್ ಶೆಟ್ಟಿ. ಪಣಿಕ್ಕರ, ಪ್ರಪ್ಪುಲ್ಲಚಂದ್ರ ಮುಗೆರೋಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ತಾಲೂಕು ಯೋಜನಾಧಿಕಾರಿ ದಯಾನಂದ, ಎಸ್.ಡಿ.ಎಂ.ಸಿ.ಅಧ್ಯಕ್ಷ ಇಸ್ಮಾಯಿಲ್, ಮುಖ್ಯ ಶಿಕ್ಷಕಿ ಪ್ಲೇವಿಯ ಡಿ.ಸೋಜ, ವಾರ್ಷಿಕೋತ್ಸವ ಸಮಿತಿ ಉಪಾಧ್ಯಕ್ಷರಾದ ಭಾರತಿ ದಯಾನಂದ, ಯಾದವ, ಕಾರ್ಯದರ್ಶಿ ಜಾನಕಿ,ಸೌಮ್ಯ, ದೀಪ್ತಿ,ಕೋಶಾಧಿಕಾರಿ ಧನಂಜಯ ಬರಂಬು, ಸಂಚಾಲಕರಾದ ಚಂದ್ರಕ್ಕಿಕೆ.ಪಿ.,ಉಷಾ, ಭುವನೇಶ್ವರ, ಶಾಲಾ ವಿದ್ಯಾರ್ಥಿ ನಾಯಕ ಮಾ| ಕುಮಾರೇಶ ಸಿ, ಗೌರವ ಸಲಹೆಗಾರರಾಗಿ ಶಿವಶಂಕರ ನಾಯಕ್ ಮಾರುತಿಪುರ, ನಿವೃತ್ತ ಎಸ್‌.ಬಿ.ಐ.ಬ್ಯಾಂಕ್ ಸಿಬ್ಬಂದಿ ರಾಮಕೃಷ್ಣ ಪಿಂಡಿವನ, ವಿಠ್ಠಲ ಶೆಟ್ಟಿ ಕೊಲ್ಲೊಟ್ಟು, ಯಶೋಧರ ಶೆಟ್ಟಿ ಕಣಿಯೂರು, ಶಾಲಾ ಸಹ ಶಿಕ್ಷಕರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ನ್ಯಾಯವಾದಿ ಧನಂಜಯ ಕುಮಾರ್ ಡಿ, ಸ್ವಾಗತಿಸಿದರು. ಮೊಗ್ರು ಶಾಲಾ ಮುಖ್ಯಶಿಕ್ಷಕ ಮಾಧವ ಗೌಡ ಬಿ.ನಿರೂಪಿಸಿದರು.


Related posts

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!