27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya
error: Content is protected !!