23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya
error: Content is protected !!