23.6 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya
error: Content is protected !!