September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

Suddi Udaya

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿಗೆ ಹಲವಾರು ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಪ್ರಾರಂಭೋತ್ಸವ

Suddi Udaya

ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಪಿ.ವಿ. ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!