September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!