23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

ಬೆಳ್ತಂಗಡಿ.: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು ಇದುವರೆಗೆ 230 ಜನರು ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದ 64 ಜಿಲ್ಲೆಗಳ ಪೈಕಿ 52 ಜಿಲ್ಲೆಗಳಲ್ಲಿ ಹಿಂದೂ ವಿರೋಧಿ ಹಿಂಸಾಚಾರದ ಘಟನೆಗಳು ನಡೆದಿವೆ. ಶೇಖ್ ಹಸೀನಾ ಸರಕಾರ ರಾಜೀನಾಮೆ ನೀಡಿದ ನಂತರ ಹಿಂದೂಗಳ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ, ಹಿಂದೂ ಯುವಕ, ಉತ್ಸವ್ ಮಂಡಲನನ್ನು ತಥಾಕಥಿತ ಧರ್ಮನಿಂಧನೆಯ ಆರೋಪದ ಮೇಲೆ ಜಿಹಾದಿ ಜನಸಮೂಹವು ನೇರವಾಗಿ ಪೊಲೀಸ್ ಠಾಣೆಗೆ ನುಗ್ಗಿ ಆ ಯುವಕನ ಎರಡೂ ಕಣ್ಣುಗಳನ್ನು ಕಿತ್ತು ಹಾಕಿದೆ. ಬಾಂಗ್ಲಾದೇಶದಲ್ಲಿ ಜಿಹಾದಿಗಳು ಹಿಂದೂಗಳನ್ನು ರಾಜಾರೋಷವಾಗಿ ಕೊಲ್ಲುವುದು, ಹಿಂದೂ ಮನೆಗಳನ್ನು ಸುಡುವುದು, ಹಿಂದೂ ದೇವಸ್ಥಾನಗಳನ್ನು ಧ್ವಂಸ ಮಾಡುವುದು, ಭೂಮಿಯನ್ನು ಕಬಳಿಸುವುದು, ಹಿಂದೂ ಮಹಿಳೆಯರ ಮೇಲೆ ಬಲಾತ್ಕಾರವೂ ನಡೆಯುತ್ತಿದೆ.

ಬಹುಸಂಖ್ಯಾತ ಹಿಂದೂಗಳಿರುವ ಭಾರತ ದೇಶ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಮುಂದಾಗಿ ಬಾಂಗ್ಲಾದೇಶಿ ನುಸುಳುಕೋರರನ್ನು ದೇಶದಿಂದ ಹೊರಹಾಕಬೇಕು, ಬಾಂಗ್ಲಾದೇಶಿ ಉತ್ಪನ್ನಗಳನ್ನು ಬಹಿಸ್ಕರಿಸಿ, ಬಾಂಗ್ಲಾದೇಶದ ಆಕ್ರಮಣಕಾರರಿಗೆ ಸಹಾಯ ಮಾಡುವವರ ಮೇಲೆ ರಾಷ್ಟ್ರದ್ರೋಹದ ಅಪರಾಧ ದಾಖಲಿಸಬೇಕೆಂದು ಹಲವು ಫಲಕಗಳನ್ನು ಹಿಡಿದುಕೊಂಡು ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜ.08. ರಂದು ಶಾಂತಿಯುತವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ಲೆಕಾರ್ಡ್ಸ್ ಹಿಡಿದು ಜನರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಸದಾಶಿವ ಶೆಟ್ಟಿ ಅರುವ, ಪರಮೇಶ್ವರ ಎಂ, ಶ್ರೀನಿವಾಸ ಸಿ, ಬಾಲಕೃಷ್ಣ ಗೌಡ ರೆಖ್ಯ, ರಾಘವೇಂದ್ರ ಕಾಮತ್ ಉಜಿರೆ, ಸೌಮ್ಯ ಬಂದಾರು, ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು, ಹಾಗೂ ಧರ್ಮ ಪ್ರೇಮಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!