September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

ಬೆಳ್ತಂಗಡಿ.: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು ಇದುವರೆಗೆ 230 ಜನರು ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದ 64 ಜಿಲ್ಲೆಗಳ ಪೈಕಿ 52 ಜಿಲ್ಲೆಗಳಲ್ಲಿ ಹಿಂದೂ ವಿರೋಧಿ ಹಿಂಸಾಚಾರದ ಘಟನೆಗಳು ನಡೆದಿವೆ. ಶೇಖ್ ಹಸೀನಾ ಸರಕಾರ ರಾಜೀನಾಮೆ ನೀಡಿದ ನಂತರ ಹಿಂದೂಗಳ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ, ಹಿಂದೂ ಯುವಕ, ಉತ್ಸವ್ ಮಂಡಲನನ್ನು ತಥಾಕಥಿತ ಧರ್ಮನಿಂಧನೆಯ ಆರೋಪದ ಮೇಲೆ ಜಿಹಾದಿ ಜನಸಮೂಹವು ನೇರವಾಗಿ ಪೊಲೀಸ್ ಠಾಣೆಗೆ ನುಗ್ಗಿ ಆ ಯುವಕನ ಎರಡೂ ಕಣ್ಣುಗಳನ್ನು ಕಿತ್ತು ಹಾಕಿದೆ. ಬಾಂಗ್ಲಾದೇಶದಲ್ಲಿ ಜಿಹಾದಿಗಳು ಹಿಂದೂಗಳನ್ನು ರಾಜಾರೋಷವಾಗಿ ಕೊಲ್ಲುವುದು, ಹಿಂದೂ ಮನೆಗಳನ್ನು ಸುಡುವುದು, ಹಿಂದೂ ದೇವಸ್ಥಾನಗಳನ್ನು ಧ್ವಂಸ ಮಾಡುವುದು, ಭೂಮಿಯನ್ನು ಕಬಳಿಸುವುದು, ಹಿಂದೂ ಮಹಿಳೆಯರ ಮೇಲೆ ಬಲಾತ್ಕಾರವೂ ನಡೆಯುತ್ತಿದೆ.

ಬಹುಸಂಖ್ಯಾತ ಹಿಂದೂಗಳಿರುವ ಭಾರತ ದೇಶ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಮುಂದಾಗಿ ಬಾಂಗ್ಲಾದೇಶಿ ನುಸುಳುಕೋರರನ್ನು ದೇಶದಿಂದ ಹೊರಹಾಕಬೇಕು, ಬಾಂಗ್ಲಾದೇಶಿ ಉತ್ಪನ್ನಗಳನ್ನು ಬಹಿಸ್ಕರಿಸಿ, ಬಾಂಗ್ಲಾದೇಶದ ಆಕ್ರಮಣಕಾರರಿಗೆ ಸಹಾಯ ಮಾಡುವವರ ಮೇಲೆ ರಾಷ್ಟ್ರದ್ರೋಹದ ಅಪರಾಧ ದಾಖಲಿಸಬೇಕೆಂದು ಹಲವು ಫಲಕಗಳನ್ನು ಹಿಡಿದುಕೊಂಡು ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜ.08. ರಂದು ಶಾಂತಿಯುತವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ಲೆಕಾರ್ಡ್ಸ್ ಹಿಡಿದು ಜನರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಸದಾಶಿವ ಶೆಟ್ಟಿ ಅರುವ, ಪರಮೇಶ್ವರ ಎಂ, ಶ್ರೀನಿವಾಸ ಸಿ, ಬಾಲಕೃಷ್ಣ ಗೌಡ ರೆಖ್ಯ, ರಾಘವೇಂದ್ರ ಕಾಮತ್ ಉಜಿರೆ, ಸೌಮ್ಯ ಬಂದಾರು, ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು, ಹಾಗೂ ಧರ್ಮ ಪ್ರೇಮಿಗಳು ಉಪಸ್ಥಿತರಿದ್ದರು.

Related posts

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya
error: Content is protected !!