24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya
error: Content is protected !!