37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya
error: Content is protected !!