September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕರ: ಮುಗೇರಡ್ಕ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!