25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ.111 ಕೋಟಿ ವ್ಯವಹಾರ, ರೂ.24 ಲಕ್ಷ ಲಾಭ,

Suddi Udaya

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya
error: Content is protected !!