July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!