23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

ಬೆಳ್ತಂಗಡಿ: ಜನರ ಕಲ್ಯಾಣಕ್ಕಾಗಿ ತಾನು ಹಲವು ಭರವಸೆಗಳನ್ನು ನೀಡಿ ಜಾರಿ ಮಾಡಿದ ಸರಕಾರ ಇಂದು ಅದೆಲ್ಲದಕ್ಕೂ ಬೆಲೆ ಏರಿಕೆ ಮೂಲಕ ತಿಲಾಂಜಲಿ ಇಟ್ಟಂತಾಗಿದೆ ಎಂದವರು ಸರಕಾರವನ್ನು ಟೀಕಿಸಿದರು.

ಬಸ್ ದರ ಏರಿಕೆಗೆ ತೈಲ ಬೆಲೆ ಏರಿಕೆ ಕಾರಣ ಎನ್ನುವ ಸರಕಾರ, ತೈಲ ಬೆಲೆ ಏರಿಕೆ ಮಾಡಲು ನಾವು ಜನರು ಒತ್ತಾಯಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು. ಕೇಂದ್ರದ ಬಿಜೆಪಿ ಸರಕಾರ ಮೊದಲೇ ತೈಲ ಬೆಲೆ ಏರಿಸಿ ಜನರ ಹೊಟ್ಟೆ ಮೇಲೆ ಹೊಡತ ಕೊಟ್ಟಿತ್ತು. ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿ‌ದ್ದ ಜನತೆ ಬಿಜೆಪಿಯನ್ನು ಸೋಲಿಸಿ ಕಾಂಗ್ರೇಸನ್ನು ಗೆಲ್ಲಿಸಿದ್ದಾಗಿತ್ತು. ಇದೀಗ ಬಸ್ ದರ ಏರಿಕೆ ಮಾಡಿದ ರಾಜ್ಯ ಸರಕಾರದ ನಡೆಯಿಂದ ಮತ್ತಷ್ಟು ಬೆಲೆ ಏರಿಕೆಗೆ ಕಾರಣವಾಗಿದೆ. ತೈಲ ದರ ಏರಿಕೆಯಾಗಿದ್ದರಿಂದ ಬಸ್ ದರ ಏರಿಸಬೇಕಾಯಿತು‌ ಎಂದು ರಾಜ್ಯ ಸರಕಾರ ಸಮರ್ಥನೆ ಮಾಡವುದು ಸರಿಯಲ್ಲ. ಇದರ ಬದಲಾಗಿ ತಾನೂ ಏರಿಸಿದ ತೈಲ ತೆರಿಗೆಯನ್ನು ಇಳಿಸಿ ಕೇಂದ್ರ ಸರಕಾರವೂ ತೈಲ ಬೆಲೆಯ ಮೇಲಿನ ಸುಂಕವನ್ನು ಕೈಬಿಡುವಂತೆ ಒತ್ತಾಯಿಸಬೇಕಿತ್ತು ಎಂದರು.

ಆದರೆ ಗಾಯದ ಮೇಲೆ‌ ಬರೆ ಎಳೆದಂತೆ ದುಬಾರಿಯಾಗಿ ಬಸ್ ದರ ಏರಿಕೆ ಮಾಡಿರುವುದು ಖಂಡನೀಯ. ಈ ಬಸ್ ದರ ಏರಿಕೆಯನ್ನು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಹಾಗೂ ಈ ದರ ಏರಿಕೆ ವಿರುದ್ದ ಹೋರಾಟ ನಡೆಸುತ್ತೇವೆ ಎಂದವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

Related posts

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಉಜಿರೆ: ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ “ಸ್ಫೂರ್ತಿದಾಯಕ ವ್ಯಕ್ತಿತ್ವ” ಕಾರ್ಯಕ್ರಮ

Suddi Udaya

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

Suddi Udaya
error: Content is protected !!