25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 11 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟದ ಒಬ್ಬರು ಅಭ್ಯರ್ಥಿ ಜಯಗಳಿಸಿದ್ದಾರೆ. ಆದರೆ ಹೈಕೋರ್ಟಿನ ಆದೇಶ ಬರಬೇಕಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಫಲಿತಾಂಶ ಘೋಷಣೆ ಮಾಡದೇ ತಡೆ ಹಿಡಿದಿದ್ದಾರೆ.

ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ
ಅಭ್ಯರ್ಥಿಗಳಾದ ಸಾಲಗಾರರ ಸಾಮಾನ್ಯ ಕ್ಷೇತ್ರದ ರಾಘವೇಂದ್ರ ನಾಯಕ್, ರಾಜು ಕೆ. ಸಾಲಿಯಾನ್, ಕೊರಗಪ್ಪ ಗೌಡ ಪಡ್ಪು, ರತೀಶ್ ಗೌಡ, ವರದಶಂಕರ ದಾಮ್ಲೆ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಬೇಬಿ ಕಿರಣ್, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಕೃಷ್ಣಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಶ್ರೀಮತಿ ತಾರಾ, ಶ್ರೀಮತಿ ಗಂಗಾವತಿ, ಸಾಲಗಾರರ ಪ.ಜಾತಿ ಕ್ಷೇತ್ರದಿಂದ ಶ್ರೀಮತಿ ಬೇಬಿ, ಸಾಲಗಾರರ ಪ. ಪಂಗಡ ಕ್ಷೇತ್ರದಿಂದ ನಾಗೇಶ್ ಟಿ. ಜಯ ಗಳಿಸಿದ್ದಾರೆ.

ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟದ ಅಭ್ಯರ್ಥಿ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಎ ಧರ್ಮರಾಜ ಗೌಡ ಅಡ್ಕಾಡಿ ಜಯ ಗಳಿಸಿದ್ದಾರೆ.

ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ರವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ನ್ಯಾಯಾಲಯದ ಆದೇಶದ ಬಳಿಕ ಘೋಷಣೆ:
ಸಹಕಾರಿ ಸಂಘದ 2 ಮಹಾಸಭೆಗೆ ಗೈರು ಹಾಜರಾದ ಸಂಘದ ಸದಸ್ಯರಿಗೆ ಸಹಕಾರಿ ಸಂಘದ ನಿಯಮದಂತೆ ಸಂಘದ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಇಲ್ಲ. ಈ ಹಿನ್ನಲೆಯಲ್ಲಿ ಮತದಾನದ ಅವಕಾಶ ಕಳೆದುಕೊಂಡ ಸಂಘದ ಸದಸ್ಯರು ಬೆಂಗಳೂರು ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್ಪಿಟಿಷನ್‌ನಂತ ನ್ಯಾಯಲಯ ಎಲ್ಲ ಸದಸ್ಯರಿಗೂ ಮತದಾನಕ್ಕೆ ಅನುಮತಿ ನೀಡಿ, ಮುಂದಿನ ಆದೇಶವನ್ನು ಕಾಯ್ದಿರಿಸಿದೆ. ನ್ಯಾಯಾಯಲದ ಆದೇಶದಂತೆ ಮತದಾನಕ್ಕೆ ಅನುಮತಿ ಪಡೆದಿರುವ ಸದಸ್ಯರು ಮತ ಚಲಾಯಿಸಿದ್ದು ಆ ಮತಗಳನ್ನು ಪ್ರತ್ಯೇಕವಾಗಿ ನಿರ್ವಹಿಸಿ, ಅಭ್ಯರ್ಥಿ, ಏಜಂಟರ ಸಮ್ಮುಖದಲ್ಲಿ ಎಣಿಕೆಯನ್ನು ಮಾಡಲಾಗಿದೆ. ಎಲ್ಲಾ ಕ್ಷೇತ್ರಗಳ ಚುನಾವಣಾ ಫಲಿತಾಂಶವನ್ನು ಉಚ್ಚ ನ್ಯಾಯಾಲಯದ ಆದೇಶ ಬಂದ ನಂತರ ಚುನಾವಣಾಧಿಕಾರಿಗಳು ಘೋಷಣೆ ಮಾಡಲಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!