September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

ಉಜಿರೆ: ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಉಷಾಕಿರಣ್‌ ಕಾರಂತ್ ರವರ ಅಧ್ಯಕ್ಷತೆಯಲ್ಲಿ ಜ.9ರಂದು ಉಜಿರೆ ಶಾರದಾ ಮಂಟಪದಲ್ಲಿ ಜರಗಿತು.

ಮಾರ್ಗದರ್ಶನ ಅಧಿಕಾರಿಯಾಗಿ ನೆರಿಯ ಪಶು ವೈದ್ಯಾಧಿಕಾರಿ ಡಾ. ಯತೀಶ್ ಕುಮಾರ್ ಸಭೆಯನ್ನು ಮುನ್ನಡೆಸಿದರು.

ಮುಖ್ಯ ಮಂತ್ರಿ ಪದಕ ಪುರಸ್ಕೃತ ಉಪ ವಲಯ ಅರಣ್ಯಧಿಕಾರಿ ಕು. ಕಮಲಾ ರವರಿಗೆ ಸಭೆಯಲ್ಲಿ ಗೌರವಿಸಲಾಯಿತು. ಪ.ಜಾತಿ ಪ. ಪಂಗಡದ 580 ಕುಟುಂಬಗಲಿಗೆ ಕುರ್ಚಿಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್‌ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್‌ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿ ರಮೇಶ್ ನಾಯ್ಕ ವಾರ್ಡ್‌ ಸಭೆಗಳಲ್ಲಿ ಬಂದ ಬೇಡಿಕೆಯನ್ನು ಓದಿದರು. ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಕಾರ್ಯದರ್ಶಿ ಶ್ರವಣ್ ಕುಮಾರ್ ವಂದಿಸಿದರು.

Related posts

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya
error: Content is protected !!