September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

ಬೆಂಗಳೂರು: ನಿನ್ನೆ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ವಿಶೇಷ ಕೋರ್ಟ್ ಆದೇಶ ನೀಡಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಶರಣಾಗಿದ್ದ ನಕ್ಸಲರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಜ.9ರಂದು ಅವರನ್ನು ಎನ್‌ಐಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್‌ಗೆ ಹಾಜರುಪಡಿಸುವ ಮುನ್ನ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ನಂತರ 6 ನಕ್ಸಲರನ್ನು ಬಿಗಿ ಪೊಲೀಸ್‌ ಬಂಧೋಬಸ್ತ್ ನಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ವಿಶೇಷ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು.

ರಾಜ್ಯದ ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೂತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರನ್ನು ಇಂದು ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು. ಆರು ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಕೆಲವೇ ಕ್ಷಣಗಳಲ್ಲಿ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.

Related posts

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ

Suddi Udaya
error: Content is protected !!