23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಅದಿತಿ ಮುಗೆರೋಡಿ ಇವರು ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆಯಾಗಿದ್ದಾರೆ.

ಅವರು, ಶ್ರೀ ಶಾರದಾ ಕಲಾ ಕೇಂದ್ರ ಟ್ರಸ್ಟ್ ರಿಜಿಸ್ಟರ್ಡ್ ಪುತ್ತೂರು ಇದರ ನಿರ್ದೇಶಕರಾದ ವಿದ್ವಾನ್ ಸುದರ್ಶನ್ ಎಂ ಎಲ್ ಭಟ್ ಇವರ ಶಿಷ್ಯೆ ವಿದುಷಿ ಡಿಂಪಲ್ ಶಿವರಾಜ್ ಇವರಿಂದ ಶ್ರೀ ಶಾರದಾ ಕಲಾ ಶಾಲೆ ಪದ್ಮುಂಜ ಶಾಖೆ ಇಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ. ವಿಶ್ವವಿದ್ಯಾನಿಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯನ್ನು ಪೂರೈಸಿದ ಅತೀ ಕಿರಿಯ ಅಭ್ಯರ್ಥಿಯಾದ ಅದಿತಿ ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪದ್ಮುಂಜ ಇಲ್ಲಿನ 5ನೇ ತರಗತಿ ವಿದ್ಯಾರ್ಥಿನಿ. ಇವರು ಮಂಜುಳಾ ಮತ್ತು ಪುರುಷೋತ್ತಮ ಮುಗೆರೋಡಿ ದಂಪತಿಯ ಪುತ್ರಿ.

Related posts

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya

ಬಂದಾರು ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya
error: Content is protected !!