22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 


ಉಜಿರೆ: ಕಳೆದ ನೂರು ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜ್ಞಾನದಾಸೋಹದ ಮೂಲಕ ಸಾವಿರಾರು ಮಂದಿ ಸಭ್ಯ, ಸುಸಂಸ್ಕೃತ ನಾಗರಿಕರನ್ನು ರೂಪಿಸಿ ಸಮಾಜಕ್ಕೆ ಅರ್ಪಿಸಿದ ಉಜಿರೆಯ ಎಸ್.ಡಿ.ಎಂ. ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣೆಯ ಅಂಗವಾಗಿ ವರ್ಷವಿಡಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.


ಅವರು ಜ.9 ರಂದು ಉಜಿರೆಯಲ್ಲಿ ಎಸ್.ಡಿ.ಎಂ. ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನ ನಾಗರಿಕರು ಸಮಾರಂಭಕ್ಕೆ ಸಕ್ರಿಯ ಸಹಕಾರ ನೀಡಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಅವರು ಶತಮಾನೋತ್ಸವ ಲಾಂಛನವನ್ನೂ ಅನಾವರಣಗೊಳಿಸಿದರು.


ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ತಮ್ಮ ಪ್ರಾಥಮಿಕ ಶಾಲಾದಿನಗಳ ಸಿಹಿ-ಕಹಿ ಅನುಭವಗಳನ್ನು ಸ್ಮರಿಸಿಕೊಂಡು, ಪ್ರಾಥಮಿಕ ಶಾಲಾ ಶಿಕ್ಷಕರು ನೀಡಿದ ಮಾರ್ಗದರ್ಶನ, ಕಲಿಸಿದ ಶಿಸ್ತು, ಸಂಸ್ಕಾರ ತಮ್ಮ ಬದುಕಿಗೆ ದಾರಿದೀಪವಾಗಿದೆ. ದೇವಪ್ಪ ಗೌಡ ಮೇಸ್ಟುç ಕಲಿಸಿದ ನಾಟಕದ ಅಭಿನಯ, ಕಮಲಾ ಟೀಚರ್ ಹೇಳಿಕೊಟ್ಟ ಸಂಸ್ಕಾರ, ತರಗತಿಯಲ್ಲಿ ಮಕ್ಕಳ  ತುಂಟಾಟಕ್ಕೆ ನೀಡಿದ ಬೆತ್ತದ ಪೆಟ್ಟು, ಹುಡುಗಿಯರ ಮಧ್ಯೆ ತಪ್ಪು ಮಾಡಿದ ಹುಡುಗರನ್ನು ಕುಳಿತುಕೊಳ್ಳಿಸಿದ ಪ್ರಕರಣವನ್ನು ಸ್ಮರಿಸಿಕೊಂಡರು.


ಶಾಲಾ ವಠಾರದಲ್ಲಿ ತಿಂದ ಐಸ್‌ಕ್ಯಾಂಡಿ, ಅಕ್ರೋಟ್, ಹಣ್ಣು-ಹಂಪಲುಗಳ ಸವಿಯ ಸೊಗಡನ್ನು ಧನ್ಯತೆಯಿಂದ ನೆನಪಿಸಿಕೊಂಡರು.
ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಶುಭಹಾರೈಸಿ ಧರ್ಮಸ್ಥಳದಿಂದ ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳಿಗೆ ನೀಡುತ್ತಿರುವ ಸಹಕಾರ, ಪ್ರೋತ್ಸಾಹವನ್ನು ಕೃತಜ್ಞತೆಯಿಂದ ಸ್ಮರಿಸಿದರು.


ಅಧ್ಯಕ್ಷತೆ ವಹಿಸಿದ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶರತ್‌ಕೃಷ್ಣ ಪಡ್ವೆಟ್ನಾಯ ಮಾತನಾಡಿ, ವರ್ಷವಿಡಿ ತಿಂಗಳಿಗೊAದು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಿಸಿದರು.


ಶತಮಾನೋತ್ಸವ ಸಮಿತಿಯ ಪ್ರಧಾನಕಾರ್ಯದರ್ಶಿ ಅಬೂಬಕ್ಕರ್ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣನಾಯ್ಕ ಧನ್ಯವಾದವಿತ್ತರು. ನಿವೃತ್ತ ಮುಖ್ಯೋಪಾಧ್ಯಾಯ ಬಿ. ಸೋಮಶೇಖರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya
error: Content is protected !!