September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

ಉಜಿರೆ: ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಉಷಾಕಿರಣ್‌ ಕಾರಂತ್ ರವರ ಅಧ್ಯಕ್ಷತೆಯಲ್ಲಿ ಜ.9ರಂದು ಉಜಿರೆ ಶಾರದಾ ಮಂಟಪದಲ್ಲಿ ಜರಗಿತು.

ಮಾರ್ಗದರ್ಶನ ಅಧಿಕಾರಿಯಾಗಿ ನೆರಿಯ ಪಶು ವೈದ್ಯಾಧಿಕಾರಿ ಡಾ. ಯತೀಶ್ ಕುಮಾರ್ ಸಭೆಯನ್ನು ಮುನ್ನಡೆಸಿದರು.

ಮುಖ್ಯ ಮಂತ್ರಿ ಪದಕ ಪುರಸ್ಕೃತ ಉಪ ವಲಯ ಅರಣ್ಯಧಿಕಾರಿ ಕು. ಕಮಲಾ ರವರಿಗೆ ಸಭೆಯಲ್ಲಿ ಗೌರವಿಸಲಾಯಿತು. ಪ.ಜಾತಿ ಪ. ಪಂಗಡದ 580 ಕುಟುಂಬಗಲಿಗೆ ಕುರ್ಚಿಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್‌ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್‌ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿ ರಮೇಶ್ ನಾಯ್ಕ ವಾರ್ಡ್‌ ಸಭೆಗಳಲ್ಲಿ ಬಂದ ಬೇಡಿಕೆಯನ್ನು ಓದಿದರು. ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಕಾರ್ಯದರ್ಶಿ ಶ್ರವಣ್ ಕುಮಾರ್ ವಂದಿಸಿದರು.

Related posts

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya

ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya
error: Content is protected !!