24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

ಉಜಿರೆ: ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಉಷಾಕಿರಣ್‌ ಕಾರಂತ್ ರವರ ಅಧ್ಯಕ್ಷತೆಯಲ್ಲಿ ಜ.9ರಂದು ಉಜಿರೆ ಶಾರದಾ ಮಂಟಪದಲ್ಲಿ ಜರಗಿತು.

ಮಾರ್ಗದರ್ಶನ ಅಧಿಕಾರಿಯಾಗಿ ನೆರಿಯ ಪಶು ವೈದ್ಯಾಧಿಕಾರಿ ಡಾ. ಯತೀಶ್ ಕುಮಾರ್ ಸಭೆಯನ್ನು ಮುನ್ನಡೆಸಿದರು.

ಮುಖ್ಯ ಮಂತ್ರಿ ಪದಕ ಪುರಸ್ಕೃತ ಉಪ ವಲಯ ಅರಣ್ಯಧಿಕಾರಿ ಕು. ಕಮಲಾ ರವರಿಗೆ ಸಭೆಯಲ್ಲಿ ಗೌರವಿಸಲಾಯಿತು. ಪ.ಜಾತಿ ಪ. ಪಂಗಡದ 580 ಕುಟುಂಬಗಲಿಗೆ ಕುರ್ಚಿಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್‌ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್‌ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿ ರಮೇಶ್ ನಾಯ್ಕ ವಾರ್ಡ್‌ ಸಭೆಗಳಲ್ಲಿ ಬಂದ ಬೇಡಿಕೆಯನ್ನು ಓದಿದರು. ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಕಾರ್ಯದರ್ಶಿ ಶ್ರವಣ್ ಕುಮಾರ್ ವಂದಿಸಿದರು.

Related posts

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya
error: Content is protected !!