25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

ಉಜಿರೆ: ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಉಷಾಕಿರಣ್‌ ಕಾರಂತ್ ರವರ ಅಧ್ಯಕ್ಷತೆಯಲ್ಲಿ ಜ.9ರಂದು ಉಜಿರೆ ಶಾರದಾ ಮಂಟಪದಲ್ಲಿ ಜರಗಿತು.

ಮಾರ್ಗದರ್ಶನ ಅಧಿಕಾರಿಯಾಗಿ ನೆರಿಯ ಪಶು ವೈದ್ಯಾಧಿಕಾರಿ ಡಾ. ಯತೀಶ್ ಕುಮಾರ್ ಸಭೆಯನ್ನು ಮುನ್ನಡೆಸಿದರು.

ಮುಖ್ಯ ಮಂತ್ರಿ ಪದಕ ಪುರಸ್ಕೃತ ಉಪ ವಲಯ ಅರಣ್ಯಧಿಕಾರಿ ಕು. ಕಮಲಾ ರವರಿಗೆ ಸಭೆಯಲ್ಲಿ ಗೌರವಿಸಲಾಯಿತು. ಪ.ಜಾತಿ ಪ. ಪಂಗಡದ 580 ಕುಟುಂಬಗಲಿಗೆ ಕುರ್ಚಿಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್‌ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್‌ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿ ರಮೇಶ್ ನಾಯ್ಕ ವಾರ್ಡ್‌ ಸಭೆಗಳಲ್ಲಿ ಬಂದ ಬೇಡಿಕೆಯನ್ನು ಓದಿದರು. ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಕಾರ್ಯದರ್ಶಿ ಶ್ರವಣ್ ಕುಮಾರ್ ವಂದಿಸಿದರು.

Related posts

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya
error: Content is protected !!