23.1 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಜ,06 ರಂದು ಸಂಸ್ಥಾಪಕರ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಉದ್ಘಾಟಿಸಿ ,ಈ ಸಂಸ್ಥೆಯು ಇಷ್ಟು ಉತ್ತಮ ಮಟ್ಟದಲ್ಲಿ ಬೆಳೆಯಲು ಶಿಕ್ಷಕರ ಪರಿಶ್ರಮ ಮತ್ತು ಹೆತ್ತವರ ಶ್ರಮವೇ ಕಾರಣ ಎಂದರು. ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಸಂಸ್ಕೃತಿ ಭರಿತವಾದ ಸಂಸ್ಥೆಯಲ್ಲಿ ಸಂಸ್ಥಾಪಕರ ಮಾರ್ಗದರ್ಶನವನ್ನು ಪಾಲಿಸಿದಲ್ಲಿ ನಾವು ಒಂದು ಒಳ್ಳೆಯ ಪಥದಲ್ಲಿ ಸಾಗಬಹುದು ಎಂದು ಕಿವಿಮಾತು ನೀಡಿದರು.

ಅತಿಥಿಯಾಗಿ ಹಳೆ ವಿದ್ಯಾರ್ಥಿಯಾದ ಪೂಜಿತ್ ಕುಲಾಲ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ ಶುಭ ಹಾರೈಸಿದರು. ಹಾಗೆಯೇ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಜಾತ, ಉಪಾಧ್ಯಕ್ಷ ವಸಂತ ಪಡೀಲ್ ,ಕುಂಭಶ್ರೀ ವೈಭವ ಸಮಿತಿಯ ಉಪಾಧ್ಯಕ್ಷ ಸೋಮನಾಥ ಕೆ ವಿ , ಕುಂಭಶ್ರೀ ವೈಭವ ಸಮಿತಿಯ ಕಾರ್ಯದರ್ಶಿ ಗಣೇಶ್ ಕುಂದರ್ ಹಾಗೂ ಶೈಕ್ಷಣಿಕ ಶಿಕ್ಷಣ ಸಲಹೆಗಾರರಾದ ಶ್ರೀಮತಿ ಉಷಾ ಜಿ , ಶ್ರೀಮತಿ ದೀಕ್ಷ ಅಶ್ವಿತ್ ಕುಲಾಲ್ ,ಪೋಷಕರು ಹಾಗೂ ಎಲ್ಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಉಪಮುಖ್ಯ ಶಿಕ್ಷಕಿ , ಶ್ರೀಮತಿ ಸೌಮ್ಯ ನಿರೂಪಿಸಿ ,ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ವಂದಿಸಿದರು.

Related posts

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya
error: Content is protected !!