ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಜ,06 ರಂದು ಸಂಸ್ಥಾಪಕರ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಉದ್ಘಾಟಿಸಿ ,ಈ ಸಂಸ್ಥೆಯು ಇಷ್ಟು ಉತ್ತಮ ಮಟ್ಟದಲ್ಲಿ ಬೆಳೆಯಲು ಶಿಕ್ಷಕರ ಪರಿಶ್ರಮ ಮತ್ತು ಹೆತ್ತವರ ಶ್ರಮವೇ ಕಾರಣ ಎಂದರು. ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಸಂಸ್ಕೃತಿ ಭರಿತವಾದ ಸಂಸ್ಥೆಯಲ್ಲಿ ಸಂಸ್ಥಾಪಕರ ಮಾರ್ಗದರ್ಶನವನ್ನು ಪಾಲಿಸಿದಲ್ಲಿ ನಾವು ಒಂದು ಒಳ್ಳೆಯ ಪಥದಲ್ಲಿ ಸಾಗಬಹುದು ಎಂದು ಕಿವಿಮಾತು ನೀಡಿದರು.

ಅತಿಥಿಯಾಗಿ ಹಳೆ ವಿದ್ಯಾರ್ಥಿಯಾದ ಪೂಜಿತ್ ಕುಲಾಲ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ ಶುಭ ಹಾರೈಸಿದರು. ಹಾಗೆಯೇ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಜಾತ, ಉಪಾಧ್ಯಕ್ಷ ವಸಂತ ಪಡೀಲ್ ,ಕುಂಭಶ್ರೀ ವೈಭವ ಸಮಿತಿಯ ಉಪಾಧ್ಯಕ್ಷ ಸೋಮನಾಥ ಕೆ ವಿ , ಕುಂಭಶ್ರೀ ವೈಭವ ಸಮಿತಿಯ ಕಾರ್ಯದರ್ಶಿ ಗಣೇಶ್ ಕುಂದರ್ ಹಾಗೂ ಶೈಕ್ಷಣಿಕ ಶಿಕ್ಷಣ ಸಲಹೆಗಾರರಾದ ಶ್ರೀಮತಿ ಉಷಾ ಜಿ , ಶ್ರೀಮತಿ ದೀಕ್ಷ ಅಶ್ವಿತ್ ಕುಲಾಲ್ ,ಪೋಷಕರು ಹಾಗೂ ಎಲ್ಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಉಪಮುಖ್ಯ ಶಿಕ್ಷಕಿ , ಶ್ರೀಮತಿ ಸೌಮ್ಯ ನಿರೂಪಿಸಿ ,ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ವಂದಿಸಿದರು.

Related posts

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya
error: Content is protected !!