25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಜ,06 ರಂದು ಸಂಸ್ಥಾಪಕರ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಉದ್ಘಾಟಿಸಿ ,ಈ ಸಂಸ್ಥೆಯು ಇಷ್ಟು ಉತ್ತಮ ಮಟ್ಟದಲ್ಲಿ ಬೆಳೆಯಲು ಶಿಕ್ಷಕರ ಪರಿಶ್ರಮ ಮತ್ತು ಹೆತ್ತವರ ಶ್ರಮವೇ ಕಾರಣ ಎಂದರು. ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಸಂಸ್ಕೃತಿ ಭರಿತವಾದ ಸಂಸ್ಥೆಯಲ್ಲಿ ಸಂಸ್ಥಾಪಕರ ಮಾರ್ಗದರ್ಶನವನ್ನು ಪಾಲಿಸಿದಲ್ಲಿ ನಾವು ಒಂದು ಒಳ್ಳೆಯ ಪಥದಲ್ಲಿ ಸಾಗಬಹುದು ಎಂದು ಕಿವಿಮಾತು ನೀಡಿದರು.

ಅತಿಥಿಯಾಗಿ ಹಳೆ ವಿದ್ಯಾರ್ಥಿಯಾದ ಪೂಜಿತ್ ಕುಲಾಲ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ ಶುಭ ಹಾರೈಸಿದರು. ಹಾಗೆಯೇ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಜಾತ, ಉಪಾಧ್ಯಕ್ಷ ವಸಂತ ಪಡೀಲ್ ,ಕುಂಭಶ್ರೀ ವೈಭವ ಸಮಿತಿಯ ಉಪಾಧ್ಯಕ್ಷ ಸೋಮನಾಥ ಕೆ ವಿ , ಕುಂಭಶ್ರೀ ವೈಭವ ಸಮಿತಿಯ ಕಾರ್ಯದರ್ಶಿ ಗಣೇಶ್ ಕುಂದರ್ ಹಾಗೂ ಶೈಕ್ಷಣಿಕ ಶಿಕ್ಷಣ ಸಲಹೆಗಾರರಾದ ಶ್ರೀಮತಿ ಉಷಾ ಜಿ , ಶ್ರೀಮತಿ ದೀಕ್ಷ ಅಶ್ವಿತ್ ಕುಲಾಲ್ ,ಪೋಷಕರು ಹಾಗೂ ಎಲ್ಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಉಪಮುಖ್ಯ ಶಿಕ್ಷಕಿ , ಶ್ರೀಮತಿ ಸೌಮ್ಯ ನಿರೂಪಿಸಿ ,ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತಾ ವಂದಿಸಿದರು.

Related posts

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya
error: Content is protected !!