22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

ಬೆಂಗಳೂರು: ನಿನ್ನೆ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ವಿಶೇಷ ಕೋರ್ಟ್ ಆದೇಶ ನೀಡಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಶರಣಾಗಿದ್ದ ನಕ್ಸಲರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಜ.9ರಂದು ಅವರನ್ನು ಎನ್‌ಐಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್‌ಗೆ ಹಾಜರುಪಡಿಸುವ ಮುನ್ನ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ನಂತರ 6 ನಕ್ಸಲರನ್ನು ಬಿಗಿ ಪೊಲೀಸ್‌ ಬಂಧೋಬಸ್ತ್ ನಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ವಿಶೇಷ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು.

ರಾಜ್ಯದ ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೂತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರನ್ನು ಇಂದು ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು. ಆರು ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಕೆಲವೇ ಕ್ಷಣಗಳಲ್ಲಿ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.

Related posts

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

Suddi Udaya
error: Content is protected !!