24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಅಸಂಖ್ಯಾತ ಸಾಧಕರ ತವರೂರು. ವಿವಿಧ ಕ್ಷೇತ್ರಗಳಲ್ಲಿ ಮೌನಕ್ರಾಂತಿ ಸಾಧಿಸುತ್ತ, ಸದ್ದಿಲ್ಲದೇ ಸುದ್ದಿ ಮಾಡುತ್ತಿರುವ ಶ್ರೇಷ್ಠ ಸಾಧಕರು ನಮ್ಮ ತಾಲೂಕಿನಲ್ಲಿದ್ದು ಅವರ ಅನ್ವೇಷಣೆಯ ಮಹಾಭಿಯಾನವೇ
“ಸಾವಿರದ ಸಾಧಕರು” ಮನೆಮನದ ಸಮ್ಮಾನ ಎಂದು ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿದರು.

ಅವರು ಜ.8ರಂದು ಬೆಳ್ತಂಗಡಿ ಸುವರ್ಣ ಆರ್ಕೆಡ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸಂಸ್ಕಾರ ಭಾರತೀ ಮಂಗಳೂರು ಇದರ ಬೆಳ್ತಂಗಡಿ ತಾಲೂಕು ಘಟಕದ ಆಶ್ರಯದಲ್ಲಿ ಆಯೋಜಿಸುವ ಸಾವಿರದ ಸಾಧಕರು ಕಾರ್ಯಕ್ರಮವು ಮುಂಡಾಜೆಯ ಸನ್ಯಾಸಿಕಟ್ಟೆ ಪರಶುರಾಮ ಕ್ಷೇತ್ರದಲ್ಲಿ ಜ.12 ರಂದು ಸ್ವಾಮಿ ವಿವೇಕಾನಂದರ ಜನ್ಮದಿನದಂದು ಚಾಲನೆ ನೀಡಿ ತಾಲೂಕಿನ 1 ಸಾವಿರ ಸಾಧಕರನ್ನು ಗುರುತಿಸಿ ಪ್ರತಿ ಗ್ರಾಮದ ಸಾಧಕ ಬಂಧುಗಳ ಮನೆಗೆ ಭೇಟಿ ನೀಡಿ ಅವರಿಗೆ “ಬೆಳ್ತಂಗಡಿಯ ಬೆಳಕು” ಎಂಬ ಪ್ರಶಸ್ತಿ ನೀಡಿ ಸನ್ಮಾನಿಸಿಲಾಗುವುದು ಎಂದರು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾ.ಸ್ವ.ಸೇ. ಸಂಘದ ತಾಲೂಕು ಸಂಪರ್ಕ ಪ್ರಮುಖ್ ಶಿವಪ್ರಸಾದ್ ಸುರ್ಯ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮುಂಡಾಜೆ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಗೋಖಲೆ ಉಪಸ್ಥಿತರಿರುವರು. ಸಮಾರೋಪ ಸಮಾರಂಭವು ಅನಂತ್ ಭಟ್ ಮಚ್ಚಿಮಲೆ ಯವರ ನಿವಾಸದಲ್ಲಿ ನಡೆಯಲಿದ್ದು ಅಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ಜಿಲ್ಲಾಧ್ಯಕ್ಷ ತಾರಾನಾಥ ಕೊಟ್ಟಾರಿ, ಮುಖ್ಯ ಅತಿಥಿಯಾಗಿ ಸೋಮಂತಡ್ಕ ಪಂಚಶ್ರೀ ಗ್ರೂಪ್ಸ್ ನ ನಾರಾಯಣ ಗೌಡ ಭಾಗವಹಿದಲಿದ್ದಾರೆ ಎಂದರು.

ಸಾವಿರದ ಸಾಧಕರು ಪ್ರಶಸ್ತಿ ಪುರಸ್ಕೃತರು – ಗ್ರಾಮ ಮುಂಡಾಜೆ

ಮೇಜರ್ ಜನರಲ್ ಎಮ್. ವಿ. ಭಟ್- ದೇಶ ಸೇವೆ, ಶ್ರೀಮತಿ ಯಮುನಾ – ನಾಟಿ ವೈದ್ಯೆ,ಶ್ರೀಮತಿ ಅಪ್ಪಿ ನ್ಯಾಕ – ಜನಪದ ಕ್ಷೇತ್ರ, ಶ್ರೀಮತಿ ಸೇಸಮ್ಮ- ನಾಟಿವೈದ್ಯೆ, ಅಡೂರು ವೆಂಕಟ್ರಾಯ – ಸಾಮಾಜಿಕ ಕ್ಷೇತ್ರ, ಬಾಬು ಗೌಡ ಮತ್ತು ಶ್ರೀಮತಿ ವಿಜಯಮ್ಮ – ಶೈಕ್ಷಣಿಕ ಕ್ಷೇತ್ರ, ಶ್ರೀಧರ್ ಭಿಡೆ – ಸಹಕಾರಿ / ಶೈಕ್ಷಣಿಕ, ನೇಮು ಶೆಟ್ಟಿ- ಸಣ್ಣ ವ್ಯಾಪಾರ ಕ್ಷೇತ್ರ, ಅನಂತ್ ಭಟ್ ಮಚ್ಚಿಮಲೆ – ಸಾಮಾಜಿಕ ಕ್ಷೇತ್ರ, ಕೊರಗಪ್ಪ ನ್ಯಾಕ -ರಾಜಕೀಯ ಕ್ಷೇತ್ರ, ಚಂದ್ರಮೋಹನ್ ಮಾರಾಟೆ – ಯಕ್ಷಗಾನ ಸಂಘಟಕ, ಅಗರಿ ರಾಮಣ್ಣ ಶೆಟ್ಟಿ ಸಮಾಜ ಸೇವೆ, ಗಣೇಶ್ ಬಂಗೇರ – ದೈವಾರಾಧನೆ, ಕಜೆ ವೆಂಕಟೇಶ್ ಭಟ್ -ಧಾರ್ಮಿಕ ಕ್ಷೇತ್ರ, ಕೀರ್ತನಾ ಕಲಾ ತಂಡ – ಸಾಂಸ್ಕೃತಿಕ ಸೇವೆ, ಯಾಂಕ್ ಚಾಲೆಂಜರ್ಸ್ ಸ್ಪೋರ್ಟ್ಸ್ ಕ್ಲಬ್ – ಕ್ರೀಡಾ ಸಂಘಟನೆ, ಸಚಿನ್ ಭಿಡೆ – ಸಾಮಾಜಿಕ ಕ್ಷೇತ್ರ.

ಪತ್ರಿಕಾಗೋಷ್ಠಿಯಲ್ಲಿ ಮುಂಡಾಜೆ ಕೀರ್ತನಾ ಕಲಾ ತಂಡದ ಸಂಚಾಲಕ ಸದಾನಂದ ಬಿ ಮುಂಡಾಜೆ, ಕೊರಗಪ್ಪ ನಾಯ್ಕ ಉಪಸ್ಥಿತರಿದ್ದರು. ಸಾವಿರದ ಸಾಧಕರು ಕಾರ್ಯಕ್ರಮದ ಸಂಚಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ ಸ್ವಾಗತಿಸಿ, ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕದ ಕಾರ್ಯದರ್ಶಿ ಅಶೋಕ್ ಧನ್ಯವಾದವಿತ್ತರು.

Related posts

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಬಳಂಜ ಗ್ರಾ.ಪಂ ನೂತನ‌ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!