30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಅದಿತಿ ಮುಗೆರೋಡಿ ಇವರು ಉತ್ತಮ ಶ್ರೇಯಾಂಕದೊಂದಿಗೆ ತೇರ್ಗಡೆಯಾಗಿದ್ದಾರೆ.

ಅವರು, ಶ್ರೀ ಶಾರದಾ ಕಲಾ ಕೇಂದ್ರ ಟ್ರಸ್ಟ್ ರಿಜಿಸ್ಟರ್ಡ್ ಪುತ್ತೂರು ಇದರ ನಿರ್ದೇಶಕರಾದ ವಿದ್ವಾನ್ ಸುದರ್ಶನ್ ಎಂ ಎಲ್ ಭಟ್ ಇವರ ಶಿಷ್ಯೆ ವಿದುಷಿ ಡಿಂಪಲ್ ಶಿವರಾಜ್ ಇವರಿಂದ ಶ್ರೀ ಶಾರದಾ ಕಲಾ ಶಾಲೆ ಪದ್ಮುಂಜ ಶಾಖೆ ಇಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ. ವಿಶ್ವವಿದ್ಯಾನಿಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯನ್ನು ಪೂರೈಸಿದ ಅತೀ ಕಿರಿಯ ಅಭ್ಯರ್ಥಿಯಾದ ಅದಿತಿ ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪದ್ಮುಂಜ ಇಲ್ಲಿನ 5ನೇ ತರಗತಿ ವಿದ್ಯಾರ್ಥಿನಿ. ಇವರು ಮಂಜುಳಾ ಮತ್ತು ಪುರುಷೋತ್ತಮ ಮುಗೆರೋಡಿ ದಂಪತಿಯ ಪುತ್ರಿ.

Related posts

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya
error: Content is protected !!