30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

ಉಜಿರೆ :ಇಲ್ಲಿನ ಸರಕಾರಿ ಉನ್ನತೀಕರಿಸಿದ ಶಾಲೆ ಬದನಾಜೆಯ ಶಾಲಾ ಸಭಾಂಗಣ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ರೂಪದಲ್ಲಿ ಒಂದು ಲಕ್ಷ ರೂಪಾಯಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ದ.ಕ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್, ನಿವೃತ್ತ ಪ್ರಾದೇಶಿಕ ನಿರ್ದೇಶಕ ಸೀತಾರಾಮ ಶೆಟ್ಟಿ ಕೆಂಬರ್ಜೆ, ಉಜಿರೆ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಸೇವಾ ಪ್ರತಿನಿಧಿ ಶ್ರೀಮತಿ ಹೇಮಲತಾ ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರುಗಳಾದ ಬಾಬು ನಾಯ್ಕ ಮತ್ತು ಸುರೇಶ್ ನಾಯ್ಕ ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ನಿರಂಜನ್, ಸುಜ್ಞಾನ ನಿಧಿ ಯೋಜನೆಯ ಸಂಚಾಲಕರಾದ ಸುಂದರ ಬಂಗೇರ ಮತ್ತು ಸಹ ಸಂಚಾಲಕರಾದ ಸೋಮಶೇಖರ,ಕೆ ಮತ್ತು ಪ್ರಗತಿ ಯುವಕ ಮಂಡಲದ ಅಧ್ಯಕ್ಷ ಪಿತಾಂಬರ ಪೂಜಾರಿ ದೇಣಿಗೆಯ ಚೆಕ್ಕನ್ನು ಸ್ವೀಕರಿಸಿದರು.

ಬದನಾಜೆ ಶಾಲೆಯಲ್ಲಿ ಮಕ್ಕಳ ಕ್ಷೀರ ಭಾಗ್ಯ, ಅಕ್ಷರ ದಾಸೋಹ, ಶಾಲಾ ಪ್ರಾರ್ಥನೆಗೆ, ಸಭೆ ಸಮಾರಂಭಗಳಿಗೆ ಅನುಕೂಲವಾಗುವಂತೆ ಸುಮಾರು 15 ಲಕ್ಷ ವೆಚ್ಚದಲ್ಲಿ ಸಭಾಂಗಣ ರಚನೆ ಕಾರ್ಯ ಪ್ರಗತಿಯಲ್ಲಿದ್ದು,ಶಾಲಾ ಹಿರಿಯ ವಿದ್ಯಾರ್ಥಿಗಳು, ಶಾಲಾಭಿಮಾನಿಗಳು ಕೈ ಜೋಡಿಸುತ್ತಿದ್ದಾರೆ. ಶಾಲಾ ಬೇಡಿಕೆಯನ್ನು ಮನ್ನಿಸಿ ಸಭಾಂಗಣಕ್ಕೆ ದೇಣಿಗೆ ನೀಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರಿಗೆ ಶಾಲಾ ಶಿಕ್ಷಕವೃಂದ, ಪೋಷಕರು, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ವಿದ್ಯಾಭಿಮಾನಿಗಳು ಭಕ್ತಿ ಪೂರ್ವಕ ವಂದನೆಗಳನ್ನು ಸಲ್ಲಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya
error: Content is protected !!