30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆಯು ವಿಪುಲವಾದ ಅವಕಾಶಗಳನ್ನು ಪಡೆಯಲು ಮಾತ್ರವಲ್ಲದೇ ಜೀವನಕ್ಕೆ ಬೇಕಾದ ಚಾರಿತ್ರ್ಯ , ಸಂವಹನ , ಸೃಜನಶೀಲತೆ , ಉನ್ನತ ಕಾರ್ಯಕ್ಕೆ ಇನ್ನೊಬ್ಬರ ಮನ ಒಲಿಸುವ ಚಾಕಚಕ್ಯತೆ ಹಾಗೂ ಬದ್ಧತೆ ಇವುಗಳನ್ನು ಮೈಗೂಡಿಸಿಕೊಳ್ಳಲು ಸಹಕಾರಿಯಾಗಿದೆ. ನಾವು ಪುರಸ್ಕರಿಸಲ್ಪಡಲು ಇರುವ ಮಾರ್ಗಗಳನ್ನು ಕೂಡ ಎನ್ನೆಸ್ಸೆಸ್ ಕಲ್ಪಿಸಿಕೊಡುತ್ತದೆ. ಹೀಗೆ ಜೀವನದ ಧನಾತ್ಮಕ ತಿರುವಿಗೆ ರಾಷ್ಟ್ರೀಯ ಸೇವಾ ಯೋಜನೆ ಪೂರಕ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರು ಹಾಗೂ ರಾಜ್ಯಪ್ರಶಸ್ತಿ ವಿಜೇತ ಪ್ರಾಕ್ತನ ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ. ಟಿ. ಕೃಷ್ಣಮೂರ್ತಿ ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಮಾತನಾಡಿ ಭಾವೀ ಜೀವನದಲ್ಲಿ ಸಾಧನೆ ಹಾಗೂ ಸ್ಥಾನಮಾನಕ್ಕಾಗಿ ರಾ.ಸೇ ಯೋಜನೆಯು ಸಹಾಯಕ ಎಂದು ತಿಳಿಸಿದರು.

ಸಹ ಪ್ರಾಚಾರ್ಯ ಡಾ. ರಾಜೇಶ್ ಬಿ ಅವರು ಶುಭಾಶಂಸನೆ ಮಾಡಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಕಛೇರಿ ಸಿಬ್ಬಂದಿಗಳಾದ ರಂಜಿತಾ ಹಾಗೂ ಚಂದ್ರಹಾಸ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಸನ್ಮಾನಿತರ ವಿವರ ನೀಡಿದರು.
ಸಲಹಾ ಸಮಿತಿಯ ಸದಸ್ಯರಾದ ಧನುಷ್ , ನಾಯಕರಾದ ಆದಿತ್ಯ ವಿ ಶರ್ಮಾ ಹಾಗೂ ಪ್ರಾಪ್ತಿ ಗೌಡ ಅವರನ್ನು ಗೌರವಿಸಲಾಯಿತು.

ಎರಡು ವರ್ಷಗಳ ಕಾಲ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ ವಿದ್ಯಾರ್ಥಿ ಸ್ವಯಂ ಸೇವಕರಿಗೆ ಪ್ರಮಾಣ ಪತ್ರ ನೀಡಲಾಯಿತು.
ಅಭಿಜಿತ್ , ಶ್ರಾವ್ಯ , ಐಶ್ವರ್ಯ , ಶ್ರುತಾ , ಸೌಜನ್ಯ ಹಾಗೂ ಆದಿತ್ಯ ಜೈನ್ ಇವರಿಗೆ ಉತ್ತಮ ಸ್ವಯಂ ಸೇವಕ ಬಹುಮಾನ ನೀಡಿ ಗೌರವಿಸಲಾಯಿತು.

ಘಟಕದ ನಾಯಕಿ ಪ್ರಾಪ್ತಿ ಗೌಡ ವಾರ್ಷಿಕ ವರದಿ ವಾಚಿಸಿದರು. ಸಂಕೇತ್ ಸ್ವಾಗತಿಸಿ , ಘಟಕದ ನಾಯಕ ಆದಿತ್ಯ ವಿ ವಂದಿಸಿದರು. ಸಂತೋಷ್ ನಿರೂಪಿಸಿದರು.

Related posts

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya
error: Content is protected !!