ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆಯು ವಿಪುಲವಾದ ಅವಕಾಶಗಳನ್ನು ಪಡೆಯಲು ಮಾತ್ರವಲ್ಲದೇ ಜೀವನಕ್ಕೆ ಬೇಕಾದ ಚಾರಿತ್ರ್ಯ , ಸಂವಹನ , ಸೃಜನಶೀಲತೆ , ಉನ್ನತ ಕಾರ್ಯಕ್ಕೆ ಇನ್ನೊಬ್ಬರ ಮನ ಒಲಿಸುವ ಚಾಕಚಕ್ಯತೆ ಹಾಗೂ ಬದ್ಧತೆ ಇವುಗಳನ್ನು ಮೈಗೂಡಿಸಿಕೊಳ್ಳಲು ಸಹಕಾರಿಯಾಗಿದೆ. ನಾವು ಪುರಸ್ಕರಿಸಲ್ಪಡಲು ಇರುವ ಮಾರ್ಗಗಳನ್ನು ಕೂಡ ಎನ್ನೆಸ್ಸೆಸ್ ಕಲ್ಪಿಸಿಕೊಡುತ್ತದೆ. ಹೀಗೆ ಜೀವನದ ಧನಾತ್ಮಕ ತಿರುವಿಗೆ ರಾಷ್ಟ್ರೀಯ ಸೇವಾ ಯೋಜನೆ ಪೂರಕ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರು ಹಾಗೂ ರಾಜ್ಯಪ್ರಶಸ್ತಿ ವಿಜೇತ ಪ್ರಾಕ್ತನ ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ. ಟಿ. ಕೃಷ್ಣಮೂರ್ತಿ ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಮಾತನಾಡಿ ಭಾವೀ ಜೀವನದಲ್ಲಿ ಸಾಧನೆ ಹಾಗೂ ಸ್ಥಾನಮಾನಕ್ಕಾಗಿ ರಾ.ಸೇ ಯೋಜನೆಯು ಸಹಾಯಕ ಎಂದು ತಿಳಿಸಿದರು.

ಸಹ ಪ್ರಾಚಾರ್ಯ ಡಾ. ರಾಜೇಶ್ ಬಿ ಅವರು ಶುಭಾಶಂಸನೆ ಮಾಡಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಕಛೇರಿ ಸಿಬ್ಬಂದಿಗಳಾದ ರಂಜಿತಾ ಹಾಗೂ ಚಂದ್ರಹಾಸ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಸನ್ಮಾನಿತರ ವಿವರ ನೀಡಿದರು.
ಸಲಹಾ ಸಮಿತಿಯ ಸದಸ್ಯರಾದ ಧನುಷ್ , ನಾಯಕರಾದ ಆದಿತ್ಯ ವಿ ಶರ್ಮಾ ಹಾಗೂ ಪ್ರಾಪ್ತಿ ಗೌಡ ಅವರನ್ನು ಗೌರವಿಸಲಾಯಿತು.

ಎರಡು ವರ್ಷಗಳ ಕಾಲ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ ವಿದ್ಯಾರ್ಥಿ ಸ್ವಯಂ ಸೇವಕರಿಗೆ ಪ್ರಮಾಣ ಪತ್ರ ನೀಡಲಾಯಿತು.
ಅಭಿಜಿತ್ , ಶ್ರಾವ್ಯ , ಐಶ್ವರ್ಯ , ಶ್ರುತಾ , ಸೌಜನ್ಯ ಹಾಗೂ ಆದಿತ್ಯ ಜೈನ್ ಇವರಿಗೆ ಉತ್ತಮ ಸ್ವಯಂ ಸೇವಕ ಬಹುಮಾನ ನೀಡಿ ಗೌರವಿಸಲಾಯಿತು.

ಘಟಕದ ನಾಯಕಿ ಪ್ರಾಪ್ತಿ ಗೌಡ ವಾರ್ಷಿಕ ವರದಿ ವಾಚಿಸಿದರು. ಸಂಕೇತ್ ಸ್ವಾಗತಿಸಿ , ಘಟಕದ ನಾಯಕ ಆದಿತ್ಯ ವಿ ವಂದಿಸಿದರು. ಸಂತೋಷ್ ನಿರೂಪಿಸಿದರು.

Related posts

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ನ್ಯಾಯಕ್ಕಾಗಿ ಭಾರತೀಯ ಮಜ್ದೂರು ಸಂಘದಿಂದ ದ.ಕ ಜಿಲ್ಲಾ ಸಂಸದರಿಗೆ ಮನವಿ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
error: Content is protected !!